ಬೆಂಗಳೂರು: ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿನ ಪ್ರಕಾರ ಜಾಗತಿಕವಾಗಿ 6 ಲಕ್ಷ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಸೋಂಕು ಇರುವ ಹೊಸಪ್ರಕರಣಗಳು ವರದಿಯಾಗಿವೆ. ಮತ್ತು ಅವುಗಳಲ್ಲಿ ಅರ್ಧದಷ್ಟು ಮಹಿಳೆಯರು ಮೃತ್ಯುವಿಗೆ ಹತ್ತಿರವಾಗುತ್ತಿದ್ದಾರೆ ಎನ್ನಲಾಗುತ್ತಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಈ ಸಮಸ್ಯೆಯನ್ನು ಪರಿಹರಿಸಲು, ಬಹುಮುಖಿ ವಿಧಾನದ ಅಗತ್ಯವಿದ್ದು ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ HPV ಲಸಿಕೆಗಳನ್ನೂ ನೀಡುವುದು ಕಡ್ಡಾಯ. ಆದರೆ ಮಾರುಕಟ್ಟೆಯಲ್ಲಿ ಈ ಒಂದು ಲಸಿಕೆ 10,000 ರೂಪಾಯಿಗೂ ಅಧಿಕ. ಹೀಗಾಗಿ ಅನೇಕ ಮಹಿಳೆಯರು ದುಬಾರಿ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಆದರೆ, ಈ ದುಸ್ಸಾಹಸ ಮಹಿಳೆಯರು ಗರ್ಭಕಂಠ ಕ್ಯಾನ್ಸರ್ ನಿಂದಾಗಿ ಸಾವಿಗೆ ಕಾರಣವಾಗಬಹುದು.
ಹೀಗಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಹಾಗೂ ಅವರಿಗೆ ಉಚಿತ ಲಸಿಕೆ ನೀಡುವ ಉದ್ದೇಶದಿಂದ ಸಿ. ಬೈರೇಗೌಡ ಅವರ ಪುತ್ರಿ ಹಾಗೂ ವೃತ್ತಿಯಲ್ಲಿ ವೈದ್ಯರಾದ ಡಾ.ಮಂಗಳಾ ಪಾಟೀಲ್ ಅವರು ತಮ್ಮ ತಂದೆಯ ಸ್ಮರಣಾರ್ಥ ವೇಮಗಲ್ ನಲ್ಲಿ ಶಿಬಿರವನ್ನು ಏರ್ಪಡಿಸುವ ಮೂಲಕ ಅಗತ್ಯವಿದ್ದ ಮಹಿಳೆಯರಿಗೆ ಉಚಿತ HPV ಲಸಿಕೆ ನೀಡಿದರು.




