ಮಂಗಳೂರು: ಜಗತ್ಪ್ರಸಿದ್ಧ ಮಂಗಳೂರು ದಸರಾ ನಡೆಯುವ ಸೌಹಾರ್ದ ತಾಣ ಕುದ್ರೋಳಿ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ವೇದಿಕೆಯ ಇತರ ಸದಸ್ಯರೊಂದಿಗೆ ಸೌಹಾರ್ದ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪೂಜೆ ಪುರಸ್ಕಾರ ಹಾಗೂ ಕಾರ್ಯಕ್ರಮಗಳನ್ನು ವೀಕ್ಷಿಸಿದರು.

ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶ ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಹಸ್ತದಿಂದ ಪ್ರತಿಷ್ಠಾಪನೆಗೊಂಡ ಶ್ರೀ ಗೋಕರ್ಣಾನಾಥ ಕ್ಷೇತ್ರವು ಸರ್ವ ಧರ್ಮದ ಜನತೆಯ ಪ್ರೀತಿ ವಿಶ್ವಾಸಗಳಿಸುವ ಮೂಲಕ ಸೌಹಾರ್ದತೆಯ ತಾಣವಾಗಿ ಜಗತ್ಪಸಿದ್ದಗೊಂಡಿದೆ. ಮಾತ್ರವಲ್ಲದೆ ನಾಡ ಹಬ್ಬವಾದ ದಸರಾದ ಇಲ್ಲಿನ ವೈಭವವು ಎಲ್ಲರ ಕಣ್ಮಣ ಸೆಳೆಯುತ್ತಿದೆ. ಮಂಗಳೂರು ದಸರಾ ಇಂದು ಜಾಗತಿಕ ಮನ್ನಣೆ ಪಡೆದಿದ್ದು, ಇಲ್ಲಿನ ದಸರಾ ಸಂಭ್ರಮದಲ್ಲಿ ದೇಶ ವಿದೇಶಗಳಿಂದ ಜನತೆ ಭಾಗವಹಿಸುವ ಮೂಲಕ ಕೂಡಿ ಬಾಳುವ ಸಂಸ್ಕ್ರತಿಯ ಪ್ರತೀಕವಾಗಿದೆ ಎಂದು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋರ ಈ ಸಂದರ್ಭದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿ ಸದಸ್ಯರಾದ ರವಿಶಂಕರ್ ಮಿಜಾರ್,ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪ್ರಮುಖರಾದ ಸುನಿಲ್ ಕುಮಾರ್ ಬಜಾಲ್, ಮಂಜುಳಾ ನಾಯಕ್, ಅಶ್ರಫ್ ಕೆ, ಡೋಲ್ಫಿ ಡಿಸೋಜ, ಮಹೇಶ್ ನಾಯಕ್, ಮರ್ಲಿನ್ ರೇಗೋ, ಫ್ಲೇವಿ ಕ್ರಾಸ್ತಾ, ಡಯಾನ ಡಿಸೋಜ, ಫ್ಲೋರಿನ್ ಡಿಸೋಜ, ಸಂಜನಾ ಛಲವಾದಿ, ಸಮರ್ಥ್ ಭಟ್, ಸ್ಟಾನಿ ಡಿಕುನ್ನಾ ಬಂಟ್ವಾಳ, ಸಿಲ್ವಿಯಾ ಸಿಕ್ವೇರಾ ಮುಂತಾದವರು ಉಪಸ್ಥಿತರಿದ್ದರು.




