ಮುಂದಿನ ತೀರ್ಮಾನ ಹೈಕಮಾಂಡ್ ಗೆ ಬಿಟ್ಟಿದ್ದು: ಬಿ ಆರ್ ಪಾಟೀಲ್

10 months ago

ಬೆಂಗಳೂರು: ವಸತಿ ಯೋಜನೆಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ ಲಂಚ ಪಡೆಯಲಾಗುತ್ತಿದೆ ಎಂದು ಆರೋಪಿಸುವ ಮೂಲಕ ಕೋಲಾಹಲ ಸೃಷ್ಟಿಸಿದ ಹಿರಿಯ ಶಾಸಕ ಹಾಗೂ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಅವರು ಭೇಟಿ ಮಾಡಿ ಸುದೀರ್ಘ ಒಂದು ಗಂಟೆ ಕಾಲ ಮಾತನಾಡಿದರು.

ಸುರ್ಜೇವಾಲಾ ಜೊತೆ ಮಾತುಕತೆ ನಡೆಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ನಾಯಕರು ಕರೆದಿದ್ದರು. ಸುರ್ಜೇವಾಲಾ ಅವರ ಜೊತೆ ದೀರ್ಘ ಚರ್ಚೆಯಾಗಿದೆ. ನಾನು ಹೇಳಬೇಕಾದದ್ದನ್ನು ಹೇಳಿದ್ದೇನೆ. ಅವರು ಎಲ್ಲ ವಿಚಾರಗಳನ್ನು ನೋಟ್ ಮಾಡಿಕೊಂಡಿದ್ದಾರೆ. ಮುಂದಿನ ತೀರ್ಮಾನ ಅವರಿಗೆ ಬಿಟ್ಟಿದ್ದು ಎಂದರು.

Leave a Reply