ಧಾರವಾಡ: ಗಾಂಧೀಜಿ ರಾಷ್ಟ್ರಕ್ಕೆ ಸಿಮೀತವಾದ ವ್ಯಕ್ತಿ ಅಲ್ಲ. ಅವರು ವಿಶ್ವಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಮಹಾತ್ಮರು ಹಾಗೂ ಶರಣರು ಇಡೀ ನಾಡಿಗೆ ವಿಶೇಷ ಕೊಡುಗೆಗಳನ್ನು ನೀಡಿರುತ್ತಾರೆ. ನಮ್ಮ ಸಿದ್ಧವೀರ ಸತ್ಸಂಗದಿಂದ 1981 ಅಕ್ಟೋಬರ್ 2 ರಿಂದ ಗಾಂಧೀಜಿಯವರ ಜಯಂತಿಯನ್ನು ಆಚರಿಸುತ್ತಿದ್ದು, ಇಂದು 45 ನೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಧಾರವಾಡ ಸಿದ್ಧವೀರ ಸತ್ಸಂಗದ ಅಧ್ಯಕ್ಷ ಹಾಗೂ ಗಾಂಧಿ ಚಿಂತಕ ಡಾ. ನಿತಿನ್ಚಂದ್ರ ಹತ್ತೀಕಾಳ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಧಾರವಾಡ ಹೊಸ ಬಸ್ ನಿಲ್ದಾಣದ ಹತ್ತಿರವಿರುವ ನೂತನ ಗಾಂಧಿ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದಕ್ಷಿಣ ಆಫ್ರಿಕಾದಲ್ಲಿ ಅಸ್ಪೃಶ್ಯತೆ ವಿರುದ್ಧ ಹೋರಾಡಿ ಜಯಸಿದರು. ಅಲ್ಲಿಂದ ಮರಳಿ ಭಾರತಕ್ಕೆ ಹಿಂತಿರುಗಿ ಸ್ವಾತಂತ್ರ್ಯ ಹೋರಾಟದಲ್ಲಿ ಧುಮಕಿದರು. ಮಹಾತ್ಮಾ ಎಂಬ ಹೆಸರು ಪಡೆದುಕೊಂಡರು. ಕ್ವಿಟ್ ಇಂಡಿಯಾ, ಚಲೇಜಾವ್ ಚಳುವಳಿ ಸೇರಿದಂತೆ ಅನೇಕ ಹೋರಾಟಗಳಲ್ಲಿ ಭಾಗಿಯಾದರು ಎಂದರು.
ಆದರ್ಶ ನಾಯಕತ್ವದ ಗುಣಗಳನ್ನು ಗಾಂಧೀಜಿಯವರಲ್ಲಿ ನಾವು ಕಂಡೆವು. ಆಲ್ಬರ್ಟ್ ಐನಸ್ಟೀನ್ ಅವರು ಗಾಂಧೀಜಿಯವರನ್ನು ಹಾಡಿಹೊಗಳಿದ್ದಾರೆ. ಮಾರ್ಟಿನ್ ಲೂಥರ್ ಕಿಂಗ್ ಅವರು ನನಗೆ ಇಬ್ಬರೂ ದೇವರು ಎಂದು ಹೇಳಿದ್ದಾರೆ. ಜೀಸಸ್ ಯೇಸುಕ್ರಿಸ್ತ ಮೊದಲನೇ ದೇವರಾದರೆ, ಮಹಾತ್ಮಾ ಗಾಂಧಿ ನನಗೆ ಬದುಕುವ ಕಲೆ ಕಲಿಸಿದ ಎರಡನೇ ದೇವರಾಗಿದ್ದಾರೆ ಎಂದರು.
ವಿರೋಧಿಸುವಿಕೆ, ಸ್ವೀಕಾರ ಮನೋಭಾವ, ರಿಯಲೈಜೇಷನ್ ಜೀವನದಲ್ಲಿ ಬಹುಮುಖ್ಯವಾಗಿವೆ. ಮಹಾತ್ಮಾ ಗಾಂಧಿಯವರ ಹತ್ಯೆ ನಡೆದ ದಿನ ವಿಶ್ವಸಂಸ್ಥೆಯ ಗೊತ್ತುವಳಿಯಿಂದ ಎಲ್ಲ ರಾಷ್ಟ್ರಗಳ ಧ್ವಜಗಳನ್ನು ಅರ್ಧಕ್ಕೆ ಹಾರಿಸಲಾಯಿತು ಎಂದು ತಮ್ಮ ವಿಶೇಷ ಉಪನ್ಯಾಸದಲ್ಲಿ ಅವರು ವಿವರಿಸಿದರು.




