ಬೆಂಗಳೂರು: ಗಣೇಶೋತ್ಸವ ಪೆಂಡಾಲ್ ಗಳಲ್ಲಿ FSSAI ಮಾನ್ಯತೆ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆಗಳು ತಯಾರಿಸಿದ ಪ್ರಸಾದ ಮಾತ್ರವೇ ವಿತರಿಸಬೇಕು ಎಂದು ಫರ್ಮಾನು ಹೊರಡಿಸಿದ್ದ ತುಘಲಕ್ ಸರ್ಕಾರ ಈಗ ಗಣೇಶ ಮೂರ್ತಿಗಳ ವಿಸರ್ಜನೆಯನ್ನ ರಾತ್ರಿ 10 ಗಂಟೆವರೆಗೆ ಮಾತ್ರ ಮಾಡಬೇಕು ಎಂಬ ಅರ್ಥವಿಲ್ಲದ ನಿಯಮ ಹೇರಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ವಿಷಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅವರು, ಕೇಸರಿ ಕುಂಕುಮ ಕಂಡರೆ ಉರಿದು ಬೀಳುವ Indian National Congress – Karnataka ನಾಯಕರಿಗೆ ಹಿಂದೂಗಳ ಹಬ್ಬ, ಜಾತ್ರೆ, ಉತ್ಸವಗಳೆಂದರೆ ಅದೇನೋ ಹೊಟ್ಟೆ ಉರಿ, ತಳಮಳ ಎಂದಿದ್ದಾರೆ.
ರಂಜಾನ್ ಸಂದರ್ಭದಲ್ಲಿ ನಡೆಯುವ ಇಫ್ತಾರ್ ಕೂಟಗಳಲ್ಲೆಲ್ಲಾ FSSAI ಮಾನ್ಯತೆ ಪಡೆದಿರುವ ಸಂಸ್ಥೆಗಳು, ವ್ಯಕ್ತಿಗಳೇ ಆಹಾರ ತಯಾರಿಸುತ್ತಾರಾ? ಕ್ರಿಸ್ಮಸ್ ಕೇಕ್ ತಯಾರಿಸುವವರೆಲ್ಲ FSSAI ಮಾನ್ಯತೆ ಪಡೆದಿರುತ್ತಾರಾ? ಅನ್ಯಧರ್ಮೀಯರಿಗೆ ಮಾತ್ರ ಬೆಣ್ಣೆ, ಹಿಂದೂಗಳಿಗೆ ಸುಣ್ಣ ಎನ್ನುವ ಈ ತಾರತಮ್ಯ ಏಕೆ? ಜಾತ್ಯತೀತತೆ ಅಂದರೆ ಇದೇನಾ? ಅಥವಾ Rahul Gandhi i ಅವರು ತೋರಿಸುವ ಸಂವಿಧಾನದಲ್ಲಿ ಹಿಂದೂಗಳು ಎರಡನೇ ದರ್ಜೆ ನಾಗರೀಕರು ಎಂದು ಬರೆಯಲಾಗಿದೆಯಾ? ಎಂದು ಪ್ರಶ್ನಿಸಿದ್ದಾರೆ.
ಸಣ್ಣ ಸಣ್ಣ ಬಡಾವಣೆಗಳಲ್ಲಿ, ಅಪಾರ್ಟ್ಮೆಂಟ್ ಗಳಲ್ಲಿ, ರಸ್ತೆಗಳ ಬದಿಯಲ್ಲಿ ಗಣೇಶ ಕೂರಿಸುವ ಪದ್ಧತಿ ಇದೆ. ಅವರೆಲ್ಲರೂ ಸಂಜೆ ಶಾಲಾ-ಕಾಲೇಜು, ಉದ್ಯೋಗ, ವ್ಯಾಪಾರದ ಕೆಲಸ ಮುಗಿದ ನಂತರ ಸಂಜೆ ಪೂಜೆ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಮೆರವಣಿಗೆ ಮೂಲಕ ವಿಸರ್ಜನೆ ಮಾಡುವ ಯೋಜನೆ ಹಾಕಿಕೊಂಡಿರುತ್ತಾರೆ. ಮೇಲಾಗಿ ರಾತ್ರಿ 8-9 ಗಂಟೆ ನಂತರ ಟ್ರಾಫಿಕ್ ಸಮಸ್ಯೆಯೂ ಇರುವುದಿಲ್ಲ. ಆಗ ಮೆರವಣಿಗೆ ಶುರು ಮಾಡಿದರೆ ವಿಸರ್ಜನೆ ಮಾಡುವ ವೇಳೆಗೆ ಕನಿಷ್ಠ ಪಕ್ಷ 11 ಗಂಟೆಯಾದರೂ ಆಗಿರುತ್ತದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ ಸಾರ್ವಜನಿಕರ ಅನುಕೂಲ ಹಾಗು ಟ್ರಾಫಿಕ್ ಸಮಸ್ಯೆ ಗಮನದಲ್ಲಿಟ್ಟುಕೊಂಡು ಗಣೇಶ ವಿಸರ್ಜನೆ ಸಮಯವನ್ನ ರಾತ್ರಿ 11:30 ರವರೆಗೆ ವಿಸ್ತರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.




