ಕಲಬುರಗಿ: ಹಣಕ್ಕಾಗಿ ಹಳೆಯ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತರಿಬ್ಬರನ್ನು ಅಪಹರಿಸಿ ರೂಮಿನಲ್ಲಿ ಮೂವರನ್ನು ಕೂಡಿ ಹಾಕಿ ಬೆತ್ತಲೆ ಮಾಡಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಹಿಂಸೆ ನೀಡಿ ಹಣವನ್ನು ಲಪಟಾಯಿಸಿರುವ ಅಮಾನುಷ ಘಟನೆ ನಗರದಲ್ಲಿ ನಡೆದಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್ ಮಡಿವಾಳ ಎಂಬಾತನಿಗೆ ಹಲ್ಲೆ ನಡೆಸಲಾಗಿದೆ. ಅರ್ಜುನ್ ಬೆಂಗಳೂರಿನಿಂದ ಹಳೆಯ ಕಾರುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಮೇ 5ರಂದು ಪರಿಚಯಸ್ಥನಾಗಿದ್ದ ರಮೇಶ್ ಎಂಬಾತನಿಗೆ ಹಳೆಯ ಕಾರು ತೋರಿಸಲು ಅರ್ಜುನ್ ತನ್ನಿಬ್ಬರು ಸ್ನೇಹಿತರಾದ ಎಂ.ಡಿ ಸಮೀರೊದ್ದಿನ್, ಅಬ್ದುಲ್ ರಹೇಮಾನ್ ಜೊತೆಗೆ ಹೋಗಿದ್ದರು.
ಈ ವೇಳೆ ಆರೋಪಿ ರಮೇಶ್ ಕಾರಿನ ಟೆಸ್ಟ್ ಡ್ರೈವ್ ಮಾಡಿ, ಕಾರಿಗೆ ಹಣ ನೀಡುವವರು ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ಇದ್ದಾರೆ. ಅಲ್ಲಿಗೆ ಹೋಗೋಣ ಎಂದು ಮೂವರನ್ನು ಕರೆದುಕೊಂಡುಹೋಗಿದ್ದಾರೆ. ನಂತರ ಯಾವುದೋ ಮನೆ ಬಳಿ ಕಾರು ನಿಲ್ಲಿಸಿದಾಗ ಸುಮಾರು ಹತ್ತಾರು ಮಂದಿ ಅರ್ಜುನ್ ಹಾಗೂ ಮತ್ತಿಬ್ಬರನ್ನು ಬಲವಂತದಿಂದ ಎಳೆದುಹೋಗಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ರಮೇಶ್ ಸೇರಿ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವರು ಹಲ್ಲೆ ನಡೆಸಿದ್ದಾರೆ.
ಕಿರಾತಕರು ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ನಡೆಸಿದ್ದಾರೆ. ಕರೆಂಟ್ ಶಾಕ್ ಬಳಿಕ ಬಡಿಗೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಹಲ್ಲೆ ಮಾಡಿ ಹಣ ಹಾಕಿಸಿಕೊಂಡು, ಬಳಿಕ ಪ್ರತಿ ಬಾರಿ ಕಾರು ಮಾರಾಟ ಮಾಡಿದಾಗ ಕಮಿಷನ್ ರೂಪದಲ್ಲಿ ಒಂದು ಲಕ್ಷ ರೂ. ಹಣ ಕೊಡಬೇಕು ಎಂದಿದ್ದಾರೆ. ಕೊಡದೆ ಹೋದರೆ ಮನೆಗೆ ನುಗ್ಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ.




