ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಸೆ.06 ರಂದು ನಡೆಯಲಿದ್ದು, ಆಮಂತ್ರಣ ಪತ್ರ ತಲುಪದ ಚಿನ್ನದ ಪದಕ, ಪ್ರಥಮ ರ್ಯಾಂಕ್ ಬಹುಮಾನ ವಿಜೇತ ವಿದ್ಯಾರ್ಥಿಗಳು ಮತ್ತು ಪಿಎಚ್.ಡಿ ಪದವಿಗೆ ಅರ್ಹರಾಗಿರುವ ವಿದ್ಯಾರ್ಥಿಗಳು ಸೆಪ್ಟೆಂಬರ್ 3ರ ಒಳಗಾಗಿ ಕಚೇರಿ ಸಮಯದಲ್ಲಿ ಹಾಜರಾಗಿ ಪಡೆದುಕೊಳ್ಳಬೇಕು ಎಂದು ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಈಗಾಗಲೇ ಚಿನ್ನದ ಪದಕ, ರ್ಯಾಂಕ್ ಪಡೆದಿರುವ ವಿದ್ಯಾರ್ಥಿಗಳು ಮತ್ತು ಪಿಎಚ್.ಡಿ ಪದವಿಗೆ ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ಪದವಿಗಳನ್ನು ಸ್ವೀಕರಿಸಲು ಸಮಾರಂಭಕ್ಕೆ ಹಾಜರಾಗುವಂತೆ ತಿಳಿಸಿ ಆಮಂತ್ರಣ ಪತ್ರ ಕಳುಹಿಸಲಾಗಿದೆ.
ಆಮಂತ್ರಣ ಪತ್ರ ತಲುಪದ ಅರ್ಹ ವಿದ್ಯಾರ್ಥಿಗಳು (ಪ್ರಾಚಾರ್ಯರು ನೀಡಿರುವ ಗುರುತಿನ ಪತ್ರದೊಂದಿಗೆ) ಖುದ್ದಾಗಿ ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದ ಕಚೇರಿಯಲ್ಲಿ ಪಡೆಯಬಹುದು.




