ಕರಡಿ ಕಾಟ ತಪ್ಪಿಸಿ ಎಂದು ಆಗ್ರಹಿಸಿ ಪ್ರತಿಭಟನೆ
ಚಿತ್ರದುರ್ಗ: ಜಿಲ್ಲಾ ಬುಡ್ಗ ಜಂಗಮ ಜನಾಂಗದವರಿಗೆ ನಾಗರಿಕ ಸೌಲಭ್ಯ ನೀಡಿ ಮತ್ತು ಕರಡಿ ಇತ್ಯಾದಿ ಪ್ರಾಣಿಗಳಿಂದ ಆಗುತ್ತಿರುವ ಪ್ರಾಣ ಭಯವನ್ನು ತಪ್ಪಿಸಿ ಎಂದು ಕರ್ನಾಟಕ ಅಲೆಮಾರಿಗಳ ಒಕ್ಕೂಟ (ಬುಡ್ಗ ಜಂಗಮ) ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಾಗರೀಕ ಮೂಲ ಭೂತ ಸೌಲಭ್ಯಗಳಿಂದ ವಂಚಿತರಾಗಿರುವ ದಾವಣಗೆರೆ ರಸ್ತೆಯಲ್ಲಿರುವ ಡಾ.ಅಂಬೇಡ್ಕರ್ ಬುಡ್ಗ ಜಂಗಮ ಕಾಲೋನಿ ಜನ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪಗಳಂತಹ ಸಮಸ್ಯೆಗಳನ್ನು ಎದುರಿಸುತ್ತಿರುವ ಸಮುದಾಯ ಬೇಡಿಕೆ ಈಡೇರಿಸಲು ಆಗ್ರಹಿಸಿದರು.
ಧಮ್ಮ ಸ್ಕೂಲ್ ಆಫ್ ಡ್ರಾಮಾ ಸಂಸ್ಥೆಯ ನಿರ್ದೇಶಕ ವಿಶ್ವ ಸಾಗರ ಮಾತನಾಡಿ, ಅಲೆಮಾರಿ ಬುಡ್ಗ ಜಂಗಮ ಜನಾಂಗದವರು ಹಲವು ವರ್ಷಗಳಿಂದ ಈ ಕಾಲೋನಿಯಲ್ಲಿ ವಾಸವಾಗಿದ್ದು, ನಾಗರೀಕ ಸೌಲಭ್ಯವಂತೂ ಮರೀಚಿಕೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆಯ ಅಧ್ಯಕ್ಷ ನರೇನಹಳ್ಳಿ ಅರುಣ್ ಕುಮಾರ್, ದಲಿತ ಮುಖಡ ದುರ್ಗಾ ಹನುಮಂತಪ್ಪ, ಅಲೆಮಾರಿ ಒಕ್ಕೂಟದ ಅಧ್ಯಕ್ಷರಾದ K M ನಾಗರಾಜ್, ಜಿಲ್ಲಾ ಅಲೆಮಾರಿ ಬುಡ್ಗ ಜಂಗಮ ಜನಾಂಗದ ಜಿಲ್ಲಾ ಅಧ್ಯಕ್ಷ ವಸಂತಕುಮಾರ್, ವೀರೇಶ, ವಸಂತು ಸೇರಿ ಹಲವು ಮುಖಂಡರು ಹಾಜರಿದ್ದರು.




