ಹುಬ್ಬಳ್ಳಿ/ಬೆಂಗಳೂರು: ಹಿರಿಯ ಸಾಹಿತಿ, ಅನುವಾದಕ, ನಟ, ಪ್ರಾಧ್ಯಾಪಕ ಜಿ.ಕೆ.ಗೋವಿಂದರಾವ್ (84) ಕಾಲವಶರಾಗಿದ್ದಾರೆ. ರಂಗಭೂಮಿ, ಚಿತ್ರರಂಗದಲ್ಲಿ ಅಭಿನಯಿಸಿದ್ದ ಇವರು, ಇಂಗ್ಲಿಷ್ ನಿಂದ ಕನ್ನಡ ಭಾಷೆಗೆ ಕೆಲವು ಕೃತಿಗಳನ್ನು ಅನುವಾದಿಸಿದ್ದರು. ಇಂಗ್ಲಿಷ್ ಪ್ರಾಧ್ಯಾಪಕಾಗಿದ್ದ ಇವರು ಬಹುಶ್ರುತ ವಿದ್ವಾಂಸರಾಗಿದ್ದರು.
ಹಿರಿಯ ಚಿಂತಕ, ರಂಗಕರ್ಮಿ ಪ್ರೊ ಜಿ.ಕೆ.ಗೋವಿಂದರಾವ್ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದ ಅವರು ಚಲನಚಿತ್ರ, ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದರು. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
— B.S.Yediyurappa (@BSYBJP) October 15, 2021
ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಅವರು ಕಾಲವಶರಾಗಿದ್ದಾರೆ. ಗೋವಿಂದರಾವ್ ಅವರ ಮೊಮ್ಮಗಳು ಡಾ.ಅಪೂರ್ವ ಮುಂಜಾನೆ 4.45ರ ಹೊತ್ತಿಗೆ ಕೊನೆಯುಸಿರೆಳೆದಿದ್ದು, ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಗ್ಗೆ 8.30 ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಹಿರಿಯ ಲೇಖಕ,
ಚಿಂತಕ, ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.ನನ್ನ ಹಿತೈಷಿ,
ಮಾರ್ಗದರ್ಶಕ ಮತ್ತು
ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು.ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/d3RDgJqyll
— Siddaramaiah (@siddaramaiah) October 15, 2021
ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಗೋವಿಂದರಾವ್, ಮಾಲ್ಗುಡಿ ಡೇಸ್, ಮಹಾಪರ್ವ ಮೊದಲಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ಅವರು 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಪ್ರಜಾಸತ್ತಾತ್ಮಕ ಆಂದೋಲನಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು.
ಹಿರಿಯ ಕಲಾವಿದರು, ಚಿಂತಕರು ಹಾಗೂ ಕಲಾಲೋಕದ ಅದ್ಭುತ ಪ್ರತಿಭೆ ಪ್ರೊ.ಜಿ.ಕೆ.ಗೋವಿಂದರಾವ್ ಅವರ ಅಗಲಿಕೆಯ ಸುದ್ದಿ ನೋವು ತಂದಿದೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ-ಹಿತೈಷಿವರ್ಗಕ್ಕೆ ಈ ನೋವು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ. pic.twitter.com/N1uUpflqlg
— Dr. C.N. Ashwath Narayan (@drashwathcn) October 15, 2021
ಈಶ್ವರ ಅಲ್ಲಾ (ಕಿರುಕಾದಂಬರಿ), ಶೇಕ್ಸ್ಪಿಯರ್ ಎರಡು ನಾಟಕಗಳ ಅಧ್ಯಯನ, ಶೇಕ್ಸ್ಪಿಯರ್ ಸಂವಾದ (ವಿಮರ್ಶಾ ಲೇಖನಗಳು), ನಡೆ-ನುಡಿ, ನಾಗರಿಕತೆ ಮತ್ತು ಅರಾಜಕತೆ, ಬಿಂಬ ಪ್ರತಿಬಿಂಬ, ಕ್ರಿಯೆ ಪ್ರತಿಕ್ರಿಯೆ, ಮನು ವರ್ಸಸ್ ಅಂಬೇಡ್ಕರ್: ತಮ್ಮ ಆಯ್ಕೆ ಯಾವುದು? ಇವು ಅವರ ಕೃತಿಗಳು.
ಜಿ.ಕೆ.ಗೋವಿಂದರಾವ್ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದಾರೆ.



