ನ್ಯಾಮತಿ ತಾ. ಬಸವನಹಳ್ಳಿ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಕಾರ್ಡ್ದಾರರಿಗೆ ತೂಕ ವಂಚನೆ
ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೆ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ನೀಡಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜಿಲ್ಲಾಧಿಕಾರಿಯವರು ಹೊನ್ನಾಳಿಗೆ ಭೇಟಿ ನೀಡಿ ದುರಸ್ಥಿಯಾದ ಕಾಲುವೆ ವೀಕ್ಷಣೆಯಾಗಿ ಬಸವನಹಳ್ಳಿ ಮಾರ್ಗವಾಗಿ ತೆರಳಿದ್ದರು. ಅಲ್ಲಿ ನ್ಯಾಯಬೆಲೆ ಅಂಗಡಿ ನೋಡಿದ ಜಿಲ್ಲಾಧಿಕಾರಿಯವರು ತಮ್ಮ ವಾಹನ ನಿಲ್ಲಿಸಿ ಅಂಗಡಿಗೆ ತೆರಳಿದಾಗ ಅಲ್ಲಿ ಒಬ್ಬ ಮಹಿಳೆ ಪಡಿತರ ಧಾನ್ಯಗಳನ್ನು ಪಡೆದುಕೊಂಡಿದ್ದರು. ಅವರನ್ನು ಮಾತನಾಡಿಸಿ ನಿಮ್ಮ ಮನೆಯಲ್ಲಿ ಎಷ್ಟು ಸದಸ್ಯರಿದ್ದಾರೆ, ಎಷ್ಟು ಆಹಾರಧಾನ್ಯ ನೀಡುತ್ತಿದ್ದಾರೆ ಎಂದು ಮಾಹಿತಿ ಪಡೆದುಕೊಂಡರು. ಮಹಿಳೆ ಮೂರು ಕೆ.ಜಿ. ಅಕ್ಕಿ ಹಾಗೂ 2 ಕೆ.ಜಿ ರಾಗಿ ಪಡೆಯಲಾಗಿದೆ ಎಂದಾಗ ತೂಕದ ನಿಖರತೆ ಪರೀಕ್ಷೆ ಮಾಡಲು ಮರು ತೂಕ ಮಾಡಲು ತಿಳಿಸಿದರು.
ಒಟ್ಟು ಆಹಾರ ಧಾನ್ಯ ಐದು ಕೆಜಿ ನೀಡಬೇಕಿದ್ದು ಇದು 4 ಕೆಜಿ 300 ಗ್ರಾಂ ತೂಕ ಮಾತ್ರ ಬಂದಿದೆ. ಪಡಿತರರಿಗೆ 700 ಗ್ರಾಂ ತೂಕದಲ್ಲಿ ಮೋಸ ಮಾಡಲಾಗಿದೆ ಎಂದು ಅರಿತ ಜಿ.ಎಂ.ಗಂಗಾಧರಸ್ವಾಮಿ ಸ್ಥಳದಲ್ಲಿಯೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಈ ನ್ಯಾಯಬೆಲೆ ಅಂಗಡಿಯನ್ನು ಅಮಾನತು ಮಾಡಲು ಸೂಚನೆ ನೀಡಿದರು.
ಈ ವೇಳೆ ಹೊನ್ನಾಳಿ ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ತಹಶೀಲ್ದಾರ್ ಇದ್ದರು.




