ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ

2 months ago

ವಸತಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಗೆ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡಿಕೊಡಲು ಗುರಿ ನಿಗದಿಪಡಿಸಲಾಗಿದೆ.

ಜಿಲ್ಲಾಧಿಕಾರಿಗಳ ಆಯ್ಕೆ ಸಮಿತಿಯ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ವಸತಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಸಮುದಾಯದ ಅರ್ಹ ಅಲೆಮಾರಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಹೊಸದುರ್ಗದ “ಸಹಾಯಕರ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ” ಕಚೇರಿಯಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ, ಜೂನ್ 30 ರ ಒಳಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08199-230050 ಸಂಪರ್ಕಿಸಬಹುದು.

Leave a Reply