ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ನಗರದ ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ ಮುದ್ದಜ್ಜಿ, ಪ್ರತಿ ವರ್ಷ ಏ. 21 ರಂದು ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಅದೇ ದಿನದಂದು ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ 2023-24 ಹಾಗೂ 2024-25 ನೇ ಸಾಲಿನದೂ ಸೇರಿದಂತೆ ಎರಡು ವರ್ಷಗಳ ಪ್ರಶಸ್ತಿ ನೀಡುವುದು ಬಾಕಿ ಇದೆ. ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕವನ್ನು ಪಡೆದು, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ, ಜಿಲ್ಲಾ ಕೇಂದ್ರದಲ್ಲಿ ಈ ಬಾರಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಅದ್ಧೂರಿಯಾಗಿ ಶೀಘ್ರವೇ ಆಚರಿಸಲಾಗುವುದು. ಇದೇ ಸಮಾರಂಭದಲ್ಲಿ ಎರಡೂ ವರ್ಷಗಳ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಕೂಡ ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಎಂ. ನಾರಾಯಣಸ್ವಾಮಿ, ಕಾರ್ಯದರ್ಶಿ ಆರ್. ಶ್ರೀನಿವಾಸ, ಖಜಾಂಚಿ ಮಲ್ಲಿಕಾರ್ಜುನ, ರಾಜ್ಯ ಪರಿಷತ್ ಸದಸ್ಯ ರಾಜಪ್ಪ ಎಸ್, ಉಪಾಧ್ಯಕ್ಷ ಪ್ರಕಾಶ್ ಕೆ., ಜಂಟಿಕಾರ್ಯದರ್ಶಿ ಮಾರುತಿ, ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಹಾಜರಿದ್ದರು.




