ಬೆಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಕುರಿತು ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ನೀಡಿರುವ ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಆಪಾದಿಸಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಣ ಮಾಡುವ ಶಕ್ತಿ ಸರ್ಕಾರಕ್ಕಿದೆ. ಜನರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧ ಎಂದರು.
ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್ಸಿಆರ್ಬಿ) ಬಿಡುಗಡೆ ಮಾಡಿರುವ ವರದಿ ಗಮನಕ್ಕೆ ಬಂದಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ನಾಲ್ಕು ತಿಂಗಳ ವರದಿ ಇಟ್ಟುಕೊಂಡು ವಿಶ್ಲೇಷಣೆ ಮಾಡಲಾಗದು. ಒಂದೊಂದು ಘಟನೆಗೂ ಪ್ರತ್ಯೇಕ ಕಾರಣಗಳು ಇರುತ್ತವೆ ಎಂದರು.
ಬಿಜೆಪಿಯವರ ಆಡಳಿತದಲ್ಲಿ ಎಷ್ಟು ಕೊಲೆಗಳು ನಡೆದಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಎಷ್ಟು ನಡೆದಿವೆ ಎಂಬ ಅಂಕಿ ಸಂಖ್ಯೆ ಬಿಡುಗಡೆ ಮಾಡಲಾಗುವುದು. ಆಗ ಯಾರ ಅವಧಿಯಲ್ಲಿ ಹೆಚ್ಚು ಕೊಲೆಗಳು ನಡೆದಿದ್ದವು ಎಂಬುದು ಜನರಿಗೆ ಗೊತ್ತಾಗುತ್ತದೆ ಎಂದರು.



