ಬೆಂಗಳೂರು: ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವುದಾಗಿ ನೀಡಿದ್ದ ಭರವಸೆಯನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸರ್ಕಾರಿ ನೌಕರರ ನೂತನ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ, ತಾಲ್ಲೂಕು ಶಾಖೆಗಳ ನಿರ್ದೇಶಕರ ಪದಾಧಿಕಾರಿಗಳ ಸಮಾವೇಶದಲ್ಲಿ ಆನ್ಲೈನ್ ಮೂಲಕ ಮಾತನಾಡಿದ ಅವರು, 2006 ರ ಏಪ್ರಿಲ್ 1ರ ನಂತರ ನೇಮಕವಾಗಿರುವವರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬ ಸರ್ಕಾರಿ ನೌಕರರ ಬೇಡಿಕೆಯ ಸಾಧಕ-ಬಾಧಕಗಳ ಅಧ್ಯಯನಕ್ಕೆ ಸಮಿತಿಯನ್ನು ರಚಿಸಲಾಗಿದೆ. ಅದು ಕೊನೆಯ ಹಂತದ ಸಭೆ ನಡೆಸಿದೆ ಎಂದರು.
ಈ ಸಮಿತಿಯ ವರದಿ ಬಂದ ಬಳಿಕ ಅಧಿಕಾರಿಗಳ ಜೊತೆ ಚರ್ಚಿಸಿ ಜಾರಿಗೊಳಿಸಲಾಗುವುದು. ಅದೇ ರೀತಿ 2015 ರಲ್ಲಿ ನಗದು ರಹಿತ ಜ್ಯೋತಿ ಸಂಜೀವಿನಿ ಯೋಜನೆಯನ್ನು 7 ಗಂಭೀರ ಕಾಯಿಲೆಗಳಿಗೆ ಅನುಷ್ಠಾನಕ್ಕೆ ತರಲಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದು, ಶೀಘ್ರವಾಗಿ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.
ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ 1 ಕೋಟಿ ರೂ. ಸಾಲಸೌಲಭ್ಯ ಯೋಜನೆಯನ್ನು ಜಾರಿಗೊಳಿಸಲು ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದ್ದು, ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದರು.
ಸರ್ಕಾರಿ ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಬೇಕು. ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕಾಯುಕ್ತ ಬಿ.ಎಸ್.ಪಾಟೀಲ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ಸಂಘದ ಪದಾಧಿಕಾರಿಗಳು ಮೊದಲಾದವರು ಹಾಜರಿದ್ದರು.




