ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ “ಬ್ರಾಂಡ್ ಬೆಂಗಳೂರು”ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ಮಧ್ಯ ರಾತ್ರಿಯಿಂದಲೇ ನಗರದ ನಾನಾ ಪ್ರದೇಶಗಳಿಂದ ತಮಗೆ ದೂರವಾಣಿ ಕರೆಗಳ ಮಹಾಪೂರ ಹರಿದು ಬರುತ್ತಿದೆ. ಅನೇಕ ಬಡಾವಣೆಗಳು ಜಲಾವೃತವಾಗಿವೆ, ನೂರಾರು ವಾಹನಗಳು ಪ್ರವಾಹದಲ್ಲಿ ತೇಲಿ ಹೋಗಿವೆ, ಅನಾಥಾಶ್ರಮಕ್ಕೂ ನೀರು ನುಗ್ಗಿದೆ, ಇಡೀ ರಾತ್ರಿ ಜನರು ಜಾಗರಣೆ ಮಾಡುತ್ತಿದ್ದಾರೆ, ಅವರಿಗೆ ಊಟದ ವ್ಯವಸ್ಥೆ ಇಲ್ಲ, ಇಷ್ಟಾದರೂ ಬಿಬಿಎಂಪಿ ನೆರವಿಗೆ ಮುಂದಾಗಿಲ್ಲ ಎಂದಿದ್ದಾರೆ.
ಕಳೆದ ಮುಳುಗಡೆಯಾಗಿದ್ದ ಸಾಯಿ ಬಡಾವಣೆ, ನಂದಗೋಕುಲ ಬಡಾವಣೆ ಸೇರಿದಂತೆ ಅನೇಕ ಬಡಾವಣೆಗಳಿಗೆ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಪಾಲಿಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಶಾಶ್ವತ ಪರಿಹಾರದ ಭರವಸೆ ನೀಡಿದ್ದರು. ಆದರೆ, ಅದು ಮಾತಿನಲ್ಲೇ ಉಳಿದು ಈ ಸಲ ಮತ್ತೆ ಆ ಬಡಾವಣೆಗಳು ನೀರಿನಲ್ಲಿ ಮುಳುಗಿವೆ. ಆದರೂ ನಿವಾಸಿಗಳ ಅಳಲು ಕೇಳಲು ಯಾರೂ ಮುಂದಾಗಿಲ್ಲ ಎಂದಿದ್ದಾರೆ.
ಹೆಬ್ಬಾಳ, ಕೋರಮಂಗಲ ಮತ್ತು ವೃಷುಭಾವತಿ ವ್ಯಾಲಿಯಲ್ಲಿ ಪ್ರವಾಹ ಬಂದಿದೆ. ಇನ್ನೂ ಮೂರು – ನಾಲ್ಕು ದಿನ ಭಾರಿ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಕ್ಷಣ ತುರ್ತು ಪರಿಹಾರ ಕಾರ್ಯಪಡೆ ರಚಿಸಿ, ಸಹಾಯವಾಣಿ ಆರಂಭಿಸಬೇಕು. ನೀರು ನುಗ್ಗಿರುವ ಮನೆಗಳಿಗೆ ತಲಾ ಕನಿಷ್ಠ ಒಂದು ಲಕ್ಷ ರೂ. ಪರಿಹಾರ ವಿತರಿಸಬೇಕು. ಆ ಮನೆಯವರಿಗೆ ಊಟ, ತಿಂಡಿ ವ್ಯವಸ್ಥೆ ಮಾಡಿ ಎರಡು ತಿಂಗಳಿಗೆ ಆಗುವಷ್ಟು ಪರಿಹಾರ ವಿತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಹಿಂದಿನ ವರ್ಷದ ಲೋಪಗಳಿಂದ ಪಾಠ ಕಲಿಯದ ಸರ್ಕಾರದ ಬೇಜವಾಬ್ದಾರಿತನದಿಂದ ನಗರದಲ್ಲಿ ಅನಾಹುತ ಸಂಭವಿಸಿದೆ. ಮುಂಚಿತವಾಗಿ ಮೋರಿ, ಚರಂಡಿ, ರಾಜ ಕಾಲುವೆಗಳಲ್ಲಿ ಹೂಳು ತೆಗೆಸುವ ಕೆಲಸ ಮಾಡಬೇಕಿತ್ತು. ನಗರದ ಅನೇಕ ಕಡೆ ವೈಟ್ ಟಾಫಿಂಗ್ ಮತ್ತು ರಿಪೇರಿ ಕಾಮಗಾರಿ ನಡೆಯುತ್ತಿದ್ದು ಅಲ್ಲಿನ ಅವಶೇಷಗಳನ್ನು ತೆರವು ಮಾಡಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಬಿಬಿಎಂಪಿ ಮುನ್ನೆಚ್ಚರಿಕೆ ವಹಿಸದಿರುವುದೇ ಅನಾಹುತಗಳಿಗೆ ಕಾರಣ ಎಂದು ಖುದ್ದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ. ಉಸ್ತುವಾರಿ ಸಚಿವ ಡಿಕೆಶಿ ಅವರ ವೈಫಲ್ಯಕ್ಕೆ ಇದಕ್ಕಿಂತ ಇನ್ಯಾವುದೇ ಸರ್ಟಿಫಿಕೇಟ್ ಬೇಕಾ ಎಂದಿದ್ದಾರೆ.
ಕಳೆದ ವರ್ಷ ವಿಧಾನಸಭೆ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಪರಿಹಾರ ಹೆಸರಿನಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿದ್ದ ಶಿವಕುಮಾರ್ ಅವರು, ಸಾರ್ವಜನಿಕರಿಗೆ ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಈಗ ಅದೆಲ್ಲಾ ಏನಾಯಿತು ಎಂಬ ಉತ್ತರ ನೀಡಬೇಕು. ಅವರು ಪರಿಹಾರ ನೀಡಲಿಲ್ಲ, ಪ್ರವಾಹದ ನೀರು ಮತ್ತು ಕಸದ ರಾಶಿಯನ್ನು ಮನೆಬಾಗಿಲಿಗೆ ತಂದು ಹಾಕಿದ್ದಾರೆ ಎಂದಿದ್ದಾರೆ.
ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸಿರುವ ಶಿವಕುಮಾರ್ ಅವರು, ಹಿಂದಿನ ಸರ್ಕಾರದ ಲೋಪ ಅನಾಹುತಕ್ಕೆ ಕಾರಣ ಎಂದಿದ್ದಾರೆ. ಆಗಾದರೆ ಎರಡು ವರ್ಷಗಳ ಕಾಲ ಇವರು ಕಡಿದು ಕಟ್ಟೆ ಹಾಕಿದ್ದೇನು? ಇದೇನಾ ಇವರ ಬ್ರಾಂಡ್ ಬೆಂಗಳೂರು? ಹೆಸರಿಗೆ ಮಾತ್ರ ಗ್ರೆಟರ್, ದಿನವೂ ಜನರಿಗೆ ಟಾರ್ಚರ್ ತಪ್ಪಿಲ್ಲ. ಒಂದೇ ಮಳೆಗೆ ಇವರ ಬ್ರಾಂಡ್ ಬೆಂಗಳೂರು ಕೊಚ್ಚಿ ಹೋಯ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗಿದೆ ಎಂದಿದ್ದಾರೆ.




