ಬೆಂಗಳೂರು: ರಾಜ್ಯ ಸರ್ಕಾರ ಬಡವರಿಗೆ ಮರಳಿ ಬಿಪಿಎಲ್ ಕಾರ್ಡ್ ನೀಡಬೇಕು. ಕಾರ್ಡ್ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರ, ನಂದಿನಿ ಲೇಔಟ್ ಗಳಲ್ಲಿ ಬಿಪಿಎಲ್ ಕಾರ್ಡ್ ರದ್ದುಗೊಂಡ ಕುಟುಂಬದವರನ್ನು ಶಾಸಕರಾದ ಡಾ. ಅಶ್ವತ್ಥನಾರಾಯಣ ಮತ್ತು ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದರು.
ನಂತರ ಮಾತನಾಡಿ, ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು. ಬಿಪಿಎಲ್ ಕಾರ್ಡ್ ಕಳೆದುಕೊಂಡವರು ಯಾರೂ ಶ್ರೀಮಂತರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. 2 ವರ್ಷದ ಮಗು ಇರುವ ಮಹಿಳೆ ಗಾರ್ಮೆಂಟ್ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅಂಗವಿಕಲ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಬಜ್ಜಿ ಮಾರಾಟ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಕೆಲಸಕ್ಕೆ ಹೋಗುತ್ತಿಲ್ಲ. ಇಂತಹ ಬಡ ಕುಟುಂಬದ ಜನರ ಮನೆಗೆ ಸಿಎಂ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ ಎಂದರು.
14 ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಸಾಮಾನ್ಯ ಪ್ರಜ್ಞೆ ಇಲ್ಲ. ಬ್ಯಾಂಕಿನಲ್ಲಿ ಸಾಲ ಕೇಳಲು ಕೂಡ ಆದಾಯ ತೆರಿಗೆ ವಿವರ ಸಲ್ಲಿಸಬೇಕಾಗುತ್ತದೆ. ಇದನ್ನು ಅರಿಯದೆ ಕಾಂಗ್ರೆಸ್ ಸರ್ಕಾರ, ಮನೆಗೆ ಭೇಟಿ ನೀಡದೆ ರೇಷನ್ ಕಾರ್ಡ್ಗಳನ್ನು ರದ್ದುಪಡಿಸಿದೆ. ಈಗ 11 ಲಕ್ಷ ಕಾರ್ಡ್ ರದ್ದುಪಡಿಸಿದ್ದು, ಇನ್ನೂ 14 ಲಕ್ಷ ಕಾರ್ಡ್ಗಳನ್ನು ರದ್ದುಪಡಿಸಲಾಗುತ್ತದೆ. ಇದಕ್ಕೂ ಮುನ್ನ ಒಂದು ನೋಟಿಸ್ ನೀಡಿ, ಮಾಹಿತಿ ಪಡೆಯಬಹುದಿತ್ತು. ಎಲ್ಲರೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂದು ಕಣ್ಣಿಲ್ಲದ ಸರ್ಕಾರ ಹೇಳಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ. ಇರುವ ಹಣವನ್ನು ಲಂಚಕ್ಕೆ ಬಳಸಲಾಗುತ್ತಿದೆ. ಶಾಸಕರು ಸರ್ಕಾರದ ಕತ್ತುಪಟ್ಟಿ ಹಿಡಿದಿದ್ದಾರೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್ ಶಾಸಕರೇ ದೂರು ಹೇಳುತ್ತಿದ್ದಾರೆ. 25 ಲಕ್ಷ ಕಾರ್ಡ್ ರದ್ದುಪಡಿಸಿದರೆ 20,000 ಕೋಟಿ ರೂ. ಬರಬಹುದು. ಆ ಹಣವನ್ನು ಶಾಸಕರಿಗೆ ಕೊಟ್ಟು ಸಮಾಧಾನ ಮಾಡಬಹುದು. ಇದು ಕಾರ್ಡ್ ರದ್ದು ಮಾಡುವುದರ ಹಿಂದಿನ ಉದ್ದೇಶ ಎಂದರು.
ಸರ್ಕಾರದ ಈ ಕ್ರಮದಿಂದಾಗಿ ಬಡವರಿಗೆ ಯಾವುದೇ ಯೋಜನೆಗಳು ಸಿಗುವುದಿಲ್ಲ. ಸಹಾಯಧನ ಸಿಗುವುದಿಲ್ಲ. ಯಾವುದೇ ಕಾರಣಕ್ಕೂ ಇನ್ನು ಮುಂದೆ ರೇಷನ್ ಕಾರ್ಡ್ ರದ್ದು ಮಾಡಬಾರದು ಎಂದು ಬಿಜೆಪಿ ಆಗ್ರಹಿಸುತ್ತದೆ. ಇದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ. ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು. ರೇಷನ್ ಕಾರ್ಡ್ ನೀಡದಿದ್ದರೆ ಅಧಿಕಾರಿಗಳನ್ನು ಕೊಠಡಿಯಲ್ಲಿ ಹಾಕಿ ಕಚೇರಿಗೆ ಬೀಗ ಹಾಕುತ್ತೇವೆ. ಸರ್ಕಾರಕ್ಕೆ ನಿಜವಾಗಲೂ ತಾಕತ್ತಿದ್ದರೆ ಬೋಗಸ್ ಕಾರ್ಡ್ ಮಂಜೂರು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಉಚಿತ ಬಸ್ ಯೋಜನೆ ರದ್ದು ಮಾಡುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮುಂದೆ ಉಚಿತ ವಿದ್ಯುತ್ ಯೋಜನೆ ಕೂಡ ರದ್ದಾಗಲಿದೆ. ಶಾಸಕರು ಅನುದಾನವಿಲ್ಲದೆ ದಂಗೆ ಏಳುವ ಸ್ಥಿತಿಗೆ ಹೋಗಿದ್ದಾರೆ. ಇದಕ್ಕಾಗಿ ಬಡವರ ಅನ್ನ ಕಿತ್ತಿರುವ ಕಾಂಗ್ರೆಸ್ ನರಕಕ್ಕೆ ಹೋಗುವುದು ಗ್ಯಾರಂಟಿ ಎಂದರು.
ಯಾವುದೇ ಅಧಿಕಾರಿಗಳು ಅಥವಾ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸದೆ ಕಚೇರಿಯಲ್ಲಿ ಕುಳಿತು ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಿದ್ದಾರೆ. 22 ಲಕ್ಷ ಕಾರ್ಡುಗಳನ್ನು ರದ್ದುಗೊಳಿಸಲು ಇಲಾಖೆಗೆ ಗುರಿ ನೀಡಲಾಗಿದೆ ಎಂಬ ಮಾಹಿತಿಯಿದೆ. ಒಮ್ಮೆ ಕೊಟ್ಟು ಮತ್ತೆ ಕಿತ್ತುಕೊಳ್ಳುತ್ತಿರುವ ಕಟುಕ ಸರಕಾರಕ್ಕೆ ಬಡವರ ಕಣ್ಣೀರು ಕಾಣಿಸುತ್ತಿಲ್ಲ ಎಂದರು.




