ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಪ್ರಶ್ನಿಸಿದರು.
ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದರು.




