ಬೆಳಗಾವಿ: ಪಂಚಮಸಾಲಿ ಸಮುದಾಯಯ ಮೀಸಲಾತಿಗೆ ಸಂಬಂಧಿಸಿ ಎಲ್ಲರಿಗೂ ಒಪ್ಪುವ ರೀತಿಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ನೀಡಲಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಪಂಚಮಸಾಲಿ ಸಮಾಜದ ಮೇಲೆ ಲಾಠಿ ಪ್ರಹಾರದ ವಿಚಾರವಾಗಿ ಮಾತನಾಡಿ, ಸರ್ಕಾರಿ, ಸಾರ್ವಜನಿಕ ಆಸ್ತಿ ಕಾಪಾಡಿಕೊಳ್ಳುವಂತದ್ದು, ಯಾರಿಗೆ ಕೂಡ ತೊಂದರೆಯಾಗದಂತೆ ನೋಡಿಕೊಂಡು ಜನರಿಗೆ ರಕ್ಷಣೆ ಕೊಡುವಂತದ್ದು, ಯಾವುದೇ ಸರ್ಕಾರ ಇದ್ದರೂ ಕೂಡ ಅವರಿಗೆ ಇರುವಂತ ಮೂಲ ಸದುದ್ದೇಶ ಎಂದರು.
ಸರ್ಕಾರಿ, ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವುದು, ಸಾರ್ವಜನಿಕರಿಗೆ ತೊಂದರೆ ಕೊಟ್ಟಾಗ ಪೊಲೀಸ್ ಇಲಾಖೆ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತದೆ. ಆ ಬಗ್ಗೆ ನಾವು ಟೀಕೆ ಮಾಡುವುದು ಸರಿಯಲ್ಲ ಎಂದರು.
ಒಮ್ಮೆ ಎಲ್ಲ ಊಹೆ ಮಾಡಿ, ಪೊಲೀಸರು ಕ್ರಮ ತೆಗೆದುಕೊಳ್ಳದೇ, ಎಲ್ಲಾ ಪ್ರತಿಭಟನಾಕಾರರು ವಿಧಾನಸಭೆಗೆ ನುಗ್ಗಿ ಬಿಟ್ಟಿದ್ದರೆ ಏನು ಆಗುತ್ತಿತ್ತು ಹೇಳಿ. ಅದು ಆಗಬಾರದು ಎನ್ನುವ ಮುನ್ನೆಚ್ಚರಿಕೆಯಿಂದ ಪೊಲೀಸರು ಆ ಕ್ರಮ ತೆಗೆದುಕೊಂಡಿದ್ದಾರೆ ಎಂದರು.
ಹಿಂದುಳಿದ ವರ್ಗಗಳಿಂದ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡಬೇಡಿ ಎಂದು ಸಿಎಂ ಮನವಿ ಪತ್ರ ಕೊಟ್ಟಿರುವ ವಿಚಾರವಾಗಿ ಮಾತನಾಡಿದ ಅವರು, ಎಲ್ಲರಿಗೂ ಒಪ್ಪುವ ರೀತಿ ಸರ್ಕಾರ ತೀರ್ಮಾನ ಮಾಡುತ್ತದೆ. ಏನೆಲ್ಲ ಸಲಹೆ ಬರುತ್ತವೆ ಅದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.



