ಬೆಂಗಳೂರು: ಮೂಲಸೌಕರ್ಯ ಸೃಷ್ಟಿಯ ಕಾಮಗಾರಿಗಳ ಆರಂಭ ಬರ ಪರಿಹಾರ ಕಾಮಗಾರಿ ಸೇರಿದಂತೆ ಕೆಲವು ಅಗತ್ಯ ಕಾಮಗಾರಿ ಆರಂಭಕ್ಕೆ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಹಸಿರು ನಿಶಾನೆ ತೋರಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಗೆ ಬಂದಿರುವ ನೀತಿ ಸಂಹಿತೆ ಬರುವ ಜೂನ್ ನಾಲ್ಕರವರೆಗೆ ಅಸ್ತಿತ್ವದಲ್ಲಿ ಇರಲಿದೆ. ಆದರೆ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಸಡಿಲಿಸುವಂತೆ ಸರ್ಕಾರ ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿತ್ತು. ಅಭಿವೃದ್ಧಿ ಕಾಮಗಾರಿಗಳು ಬರ ಪರಿಹಾರ ಯೋಜನೆಗಳಿಗೆ ನೀತಿ ಸಂಹಿತೆ ಅಡ್ಡಿಯಾಗಿದೆ. ಇದರಿಂದ ದೈನಂದಿನ ಆಡಳಿತ ನಿರ್ವಹಣೆ ಕೂಡ ಕಷ್ಟವಾಗಿದೆ ಎಂದು ಸರ್ಕಾರ ಮನವಿ ಸಲ್ಲಿಸಿತ್ತು.
ಸರ್ಕಾರದ ಮನವಿಗೆ ಸ್ಪಂದಿಸಿರುವ ಚುನಾವಣಾ ಆಯೋಗ ಇದೀಗ ಶರತ್ತುಗಳಿಗೆ ಒಳಪಟ್ಟು ಬರ ಪರಿಹಾರ ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಎಲ್ಲಾ ಇಲಾಖೆಗಳಿಗೆ ಸುತ್ತೋಲೆಯೊಂದನ್ನು ರವಾನಿಸಿದ್ದಾರೆ.
ಚುನಾವಣಾ ಆಯೋಗದ ಷರತ್ತುಗಳಿಗೆ ಒಳಪಟ್ಟು ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಮೂಲಭೂತ ಸೌಲಭ್ಯ ಕಾಮಗಾರಿಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಸರಕು ಮತ್ತು ಸೇವೆಗಳ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಗಳನ್ನು ಆಹ್ವಾನಿಸೋದಕ್ಕೆ, ಟೆಂಡರ್ ಗಳನ್ನು ಅಂತಿಮಗೊಳಿಸುವುದು ಹಾಗೂ ಕಾರ್ಯಾದೇಶಗಳನ್ನು ನೀಡುವ ಕುರಿತ ಪ್ರಸ್ತಾವನೆಗಳಿಗೆ ಸಕ್ಷಮ ಪ್ರಾಧಿಕಾರಗಳು ಆಯೋಗದ ನಿರ್ಣಯದಲ್ಲಿನ ಷರತ್ತುಗಳಿಗೆ ಒಳಪಟ್ಟು ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.




