ಮೈಸೂರು: ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದರು.
ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳು ಎಂದರು.
ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಸುಮಾರು 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ ಎಂದರು.
ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲಬುರಗಿಯ ಭೇಟಿ ಸಂದರ್ಭದಲ್ಲಿ ತಿಳಿಸಿದ್ದು, ಸರ್ಕಾರ ಮತ್ತು ಎನ್ಡಿಆರ್ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17,000 ರೂ., ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31,000 ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು ಎಂದರು.




