ದಾವಣಗೆರೆ: ಸಾಲ ವಸೂಲಿ ಹೆಸರಿನಲ್ಲಿ ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ನಿಲ್ಲುತ್ತಲೇ ಇಲ್ಲ. ಜೈಲು ಶಿಕ್ಷೆ ದಂಡ ಮೊದಲಾದ ಸರ್ಕಾರದ ಕಾನೂನಿನ ಬ್ರಹ್ಮಾಸ್ತ್ರಕ್ಕೂ ಈ ಸಂಸ್ಥೆಗಳು ಜಗ್ಗುತ್ತಿಲ್ಲ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಮೈಕ್ರೋ ಫೈನಾನ್ಸ್ ಸಂಸ್ಥೆಯಲ್ಲಿ ಬಾಕಿ ಉಳಿಸಿಕೊಂಡಿರುವ ಕೇವಲ 99 ರೂಪಾಯಿಗೆ 58 ಸಾವಿರ ರೂಪಾಯಿ ಕಟ್ಟುವಂತೆ ಬ್ಯಾಂಕೊಂದು ದಾವಣಗೆರೆಯಲ್ಲಿ ಚಂದ್ರಶೇಖರ್ ಎಂಬ ಗ್ರಾಹಕರಿಗೆ ನೊಟೀಸ್ ಕೊಟ್ಟು, ಹಣ ಪಾವತಿಸುವಂತೆ ಕಿರುಕುಳ ನೀಡುತ್ತಿದೆ.
ಚಂದ್ರಶೇಖರ್ ಆನ್ಲೈನ್ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ 10 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಪ್ರತಿ ತಿಂಗಳು ನಿಯಮಿತವಾಗಿ ಕಂತಿನಂತೆ ಎಲ್ಲಾ ಸಾಲವನ್ನು ಕಟ್ಟಿದ್ದರು. ಉಳಿದ 99 ರೂ. ಕಟ್ಟಿಸಿಕೊಂಡು ಕ್ಲೀಯರೆನ್ಸ್ ಕೊಡಿ ಎಂದು ಕೇಳಿದಾಗ 58,000 ರೂ. ಕಟ್ಟುವಂತೆ ಸೂಚಿಸಿದ್ದಾರೆ. ನಿಮಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ಬೇಕು ಅಂದರೆ ವಿವಿಧ ಶುಲ್ಕಗಳ ರೂಪದಲ್ಲಿ ವಿಧಿಸಲಾಗಿರುವ 58 ಸಾವಿರ ಕಟ್ಟಬೇಕು ಎಂದು ಚಂದ್ರಶೇಖರ್ಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹೇಳಿದ್ದಾರೆ.
ದಾಖಲೆ ಪ್ರಕಾರ ಕೇವಲ 99 ರೂಪಾಯಿ ಕಟ್ಟಿದರೆ ಸಾಲ ಮುಕ್ತವಾಗುತ್ತದೆ. ಆದರೆ ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿ 58,000 ಕಟ್ಟಲೇಬೇಕು ಎಂದು ಕಿರುಕುಳ ನೀಡುತ್ತಿದ್ದಾರೆ ಎಂದು ಚಂದ್ರಶೇಖರ್ ಸರ್ಕಾರದ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ ಈ ಬಗ್ಗೆ ಆರ್ಬಿಐಗೆ ಪತ್ರ ಬರೆಯಲು ಮುಂದಾಗಿದ್ದಾರೆ.




