ಹಾಸನ: ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಇಂದು ಕೂಡಾ ಶ್ರೀ ಹಾಸನಾಂಬ ದೇವಿ ಜಾತ್ರಾ ಮಹೋತ್ಸವದ ವ್ಯವಸ್ಥೆಗಳ ಪರಿಶೀಲಿಸಿ ನಂತರ ಸರದಿ ಸಾಲಿನಲ್ಲಿ ಸಾಗುತ್ತಿದ್ದ ಸಾರ್ವಜನಿಕರನ್ನು ಮಾತನಾಡಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ನಾಗರಿಕರು, ಈ ಬಾರಿ ಜಾತ್ರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶ್ರೀ ಹಾಸನಾಂಬ ದೇವಾಲಯದ ಆವರಣದಲ್ಲಿ ಏರ್ಪಡಿಸಿರುವ ಸಾಂಸ್ಕೃತಿಕ ವೇದಿಕೆಯಲ್ಲಿ ಮಾತನಾಡಿದ ಕೃಷ್ಣ ಬೈರೇಗೌಡ ಕಳೆದ ವರ್ಷದಲ್ಲಿ 5-6 ಗಂಟೆಗೆ ಧರ್ಮದರ್ಶನ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಇಂದು 01 ರಿಂದ 1.30 ಗಂಟೆಗೆ ಸುಗಮವಾಗಿ ಸುಲಲಿತವಾಗಿ ದರ್ಶನ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು.
ನಾಡಿನ ವಿವಿಧ ಭಾಗಗಳಿಂದ ಕಲಾವಿದರನ್ನು ಕರೆಸಿ ಅವರಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಭಕ್ತಾದಿಗಳಿಗೆ ಜಾನಪದ ಕಲೆ, ಸುಗಮ ಸಂಗೀತದ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಾಸನಾಂಬ ಕಲಾಕ್ಷೇತ್ರ ಸೇರಿದಂತೆ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ. ಆ ಕಾರ್ಯಕ್ರಮಗಳಲ್ಲಿ ಎಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದರು.
ಈ ವೇಳೆಯಲ್ಲಿ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಎಂ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪೂರ್ಣಿಮಾ ಬಿ.ಆರ್, ಉಪ ವಿಭಾಗಾಧಿಕಾರಿ ಹಾಗೂ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಮಾರುತಿ ಮತ್ತಿತರರು ಉಪಸ್ಥಿತರಿದ್ದರು.






