ಬೆಂಗಳೂರು: ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ರೇವಣ್ಣ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಿಂದ ನೇರವಾಗಿ ಮಾಜಿ ಪ್ರಧಾನಿ ದೇವೇಗೌಡ ನಿವಾಸಕ್ಕೆ ಆಗಮಿಸಿದರು.
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
- ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು: ಸಿದ್ದರಾಮಯ್ಯ
ರೇವಣ್ಣ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ, ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದ ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಈ ವೇಳೆ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.
ಮನೆಗೆ ಆಗಮಿಸಿದ ರೇವಣ್ಣ ತಂದೆ ತಾಯಿಯ ಪಾದಕ್ಕೆ ನಮಿಸಿ ಒಳ ಪ್ರವೇಶಿಸಿದರು. ಬಳಿಕ ಮನೆಯಲ್ಲಿನ ದೇವರ ಕೋಣೆಯಲ್ಲಿ ಸುದೀರ್ಘ ಹೊತ್ತು ಪೂಜೆಯಲ್ಲಿ ನಿರತರಾದರು. ಬಳಿಕ ಕುಟುಂಬ ಸದಸ್ಯರೊಂದಿಗೆ ಕೆಲ ಕಾಲ ಮಾತನಾಡಿದ ಅವರು ನಂತರ ಪಕ್ಷದ ಕೆಲವು ಶಾಸಕರು ಮತ್ತು ಪ್ರಮುಖ ನಾಯಕರೊಂದಿಗೆ ಮಾತುಕತೆ ನಡೆಸಿದರು.
ನಂತರ ರೇವಣ್ಣ ಬೆಂಗಳೂರಿನ ಜೆಪಿ ನಗರದಲ್ಲಿರುವ ತಿರುಮಲ ಲಕ್ಷ್ಮಿ ವೆಂಕಟೇಶ್ವರ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿದರು. ದೇವಾಲಯದಲ್ಲಿ ಕುಂಬಳಕಾಯಿ, ಈಡುಗಾಯಿ ದೃಷ್ಟಿ ತೆಗೆಸಿ ರೇವಣ್ಣ ಒಬ್ಬರೇ ಪೂಜೆ ಮಾಡಿದರು. ಇಲ್ಲಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಶೃಂಗೇರಿಗೆ ಕೂಡ ಭೇಟಿ ನೀಡುವ ಸಾಧ್ಯತೆಯಿದೆ.




