ಎಚ್.ಡಿ.ರೇವಣ್ಣಗೆ ಏಳು ದಿನಗಳ ಕಾಲ ನ್ಯಾಯಾಂಗ ಬಂಧನ

2 years ago

ಬೆಂಗಳೂರು: ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಗರದ 17ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಸಿದೆ.

17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ. ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ನೀಡಿದ್ದ ಅವಧಿ ಇಂದಿಗೆ ಮುಗಿದಿತ್ತು. ಕಳೆದ ಶನಿವಾರ ಎಸ್ಐಟಿಯಿಂದ ಬಂಧಿಸಲಾಗಿರುವ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಭಾನುವಾರ ಹಾಜರು ಪಡಿಸಲಾಗಿತ್ತು.

ಅಂದು ನ್ಯಾಯಾಧೀಶರು ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ನಾಲ್ಕು ದಿನಗಳ ಕಾಲ ಎಸ್ಐಟಿ ವಶಕ್ಕೆ ಒಪ್ಪಿಸಿದ್ದರು.

ಜಾಮೀನು ಅರ್ಜಿ: ಈ ನಡುವೆ ತಮಗೆ ಜಾಮೀನು ಕೊಡುವಂತೆ ಕೋರಿ, ರೇವಣ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿ ಗಳ ವಿಶೇಷ ನ್ಯಾಯಾಲಯವು ನಾಳೆಗೆ ಮುಂದೂಡಿದೆ. ರೇವಣ್ಣ ಅವರ ಮನವಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಒಂದು ವಾರ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಲಾಗಿದೆ.

Leave a Reply