ಬೆಂಗಳೂರು: ಉತ್ತರ ತೆಲಂಗಾಣ ಮತ್ತು ವಿದರ್ಭದಲ್ಲಿ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದೆ. ಇದರಿಂದಾಗಿ ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ಈ ಹಿನ್ನೆಲೆಯಲ್ಲಿ ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ,ರಾಯಚೂರು, ವಿಜಯಪುರ, ಯಾದಗಿರಿ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಉತ್ತರ ತೆಲಂಗಾಣ ಮತ್ತು ವಿದರ್ಭದಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶದಿಂದಾಗಿ ಚಂಡಮಾರುತ ಉಂಟಾಗಿದೆ. ಇದರ ಕೇಂದ್ರ ಬಿಂದುವನ್ನು ಮಹಾರಾಷ್ಟ್ರ ಕರಾವಳಿಗೆ ಸರಾಸರಿ ಸಮುದ್ರ ಮಟ್ಟದಿಂದ 3.1 ಮತ್ತು 4.5 ಕಿಮೀ ನಡುವೆ ಸರಾಸರಿ ಗುರುತಿಸಲಾಗಿದೆ.
ಇದರ ಪರಿಣಾಮದಿಂದಾಗಿ ಉತ್ತರ ಒಳನಾಡಿನ ಕರ್ನಾಟಕದಾದ್ಯಂತ ದಕ್ಷಿಣ ಕರ್ನಾಟಕ ಹಲವು ಕಡೆ ಮತ್ತು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಕೂಡಾ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.




