ಬೆಂಗಳೂರು: ನಾಯಕತ್ವ ವಿಚಾರವಾಗಿ ಉಂಟಾಗಿರುವ ಗೊಂದಲಗಳನ್ನು ಹೈಕಮಾಂಡ್ ಕೂಡಲೇ ಬಗೆಹರಿಸಬೇಕು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೇನು ಬಜೆಟ್ ಸಿದ್ಧತೆ ಸಭೆಗಳನ್ನು ನಡೆಸಲಿದ್ದಾರೆ. ಗೊಂದಲಗಳನ್ನು ಇಟ್ಟುಕೊಂಡು ಬಜೆಟ್ ತಯಾರಿ ಮಾಡಲು ಆಗುವುದಿಲ್ಲ. ಹೀಗಾಗಿ ಹೈಕಮಾಂಡ್ ಬಜೆಟ್ ಸಿದ್ಧತಾ ಸಭೆಗಳು ಆರಂಭವಾಗುವ ಮುನ್ನವೇ ಈ ಗೊಂದಲಗಳಿಗೆ ಬ್ರೇಕ್ ಹಾಕಬೇಕು ಎಂದು ತಿಳಿಸಿದರು.
ವಾಡಿಕೆಯಂತೆ ಮುಂಬರುವ ಫೆಬ್ರವರಿಯಲ್ಲಿ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಯಾರಾದರೂ ಒಬ್ಬರು ಬಜೆಟ್ ಮಂಡಿಸಲೇಬೇಕು. ಹೀಗಾಗಿ ಹೈಕಮಾಂಡ್ ಎಲ್ಲ ಗೊಂದಲಗಳನ್ನು ಬಗೆಹರಿಸಬೇಕು ಎಂದು ತಿಳಿಸಿದರು.
ದೆಹಲಿಯಲ್ಲಿ ಕೆಲವರು ಮುಂದಿನ ಮುಖ್ಯಮಂತ್ರಿ ಪರಮೇಶ್ವರ್ ಎಂದು ಘೋಷಣೆ ಕೂಗಿದ್ದಾರೆ. ಇದು ಅವರು ನನ್ನ ಮೇಲೆ ಇಟ್ಟಿರುವ ಪ್ರೀತಿ. ಇದಕ್ಕೆ ನಾನು ಏನನ್ನು ಹೇಳುವುದಿಲ್ಲ ಎಂದರು.




