ಮಂಗಳೂರು: ಹಿಂದೂಗಳ ವೋಟು ಹೆಚ್ಚಾಗಲು ಹಿಂದೂ ಹೆಣ್ಮಕ್ಕಳು ಮೂರಕ್ಕಿಂತ ಕಡಿಮೆ ಹೆರಬಾರದು ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದೀಪಾವಳಿ ಪ್ರಯುಕ್ತ ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶ ಪ್ರಜಾಪ್ರಭುತ್ವ ದೇಶ. ಇಲ್ಲಿ ಜನಪ್ರತಿನಿಧಿಗಳು ಆಯ್ಕೆಯಾಗುವುದು ಜನಗಳ ವೋಟಿನ ಆಧಾರದ ಮೇಲೆ. ಹಾಗಾಗಿ, ಹಿಂದೂಗಳ ವೋಟು ಹೆಚ್ಚಾಗಲು ಹಿಂದೂ ಹೆಣ್ಮಕ್ಕಳು ಮೂರಕ್ಕಿಂತ ಕಡಿಮೆ ಹೆರಬಾರದು. ಹಿಂದೂಗಳ ಮನೆಯಲ್ಲಿ ವೋಟಿನ ಸಂಖ್ಯೆ ಕಡಿಮೆ ಆಗಬಾರದು. ಈ ಬಗ್ಗೆ ಹಿಂದೂ ದಂಪತಿಗಳು ನಿರ್ಣಯ ಮಾಡಿಕೊಳ್ಳಬೇಕು ಎಂದರು.
ಉಳ್ಳಾಲದಲ್ಲಿ ಹಿಂದೂ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ. ಯಾಕೆಂದರೆ ಅಲ್ಲಿನ ಬ್ಯಾರಿಗಳ ಮನೆಯಲ್ಲಿ ಆರರಿಂದ ಏಳು ಮಕ್ಕಳಿದ್ದಾರೆ. ಅಲ್ಲಾನ ಹೆಸರಿನಲ್ಲಿ ಅವರು ಮಕ್ಕಳು ಮಾಡುತ್ತಲೇ ಇದ್ದಾರೆ. ಹಿಂದೂಗಳಲ್ಲಿ ವೋಟಿಲ್ಲದ ಕಾರಣ ನಮ್ಮವರು ಸೋಲುತ್ತಿದ್ದಾರೆ ಎಂದರು.
ಉಳ್ಳಾಲದಲ್ಲಿ ಕೇವಲ 90 ಸಾವಿರ ಹಿಂದೂಗಳ ವೋಟಿದೆ. ಆದರೆ, ಒಂದು ಲಕ್ಷದ 10 ಸಾವಿರ ಬ್ಯಾರಿಗಳೇ ಇದ್ದಾರೆ. ಹಾಗಾಗಿ, ಖಾದರ್ ಗೆಲ್ಲುತ್ತಲೇ ಇದ್ದಾರೆ. ಹಾಗಾಗಿ, ಹಿಂದೂಗಳು ಮಕ್ಕಳು ಮಾಡಬೇಕು ಎಂದರು.




