ಬೆಂಗಳೂರು: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಅವರು ಹೊಂದಿರುವ ಸ್ಥಾನದಿಂದಾಗಿ ಗೌರವಾರ್ಹರಾಗಿದ್ದಾರೆ. ರಾಜಕೀಯ ವಿಷಯಗಳಲ್ಲಿ ಮೂಗು ತೂರಿಸುವುದು ಹಾಗೂ ಕಾಂಗ್ರೆಸ್ ನಾಯಕರನ್ನು ಅನಗತ್ಯವಾಗಿ ಟೀಕಿಸುವುದು ಅವರು ಹೊಂದಿರುವ ಸ್ಥಾನಕ್ಕೆ ಘನತೆ ತರುವುದಿಲ್ಲ ಎಂಬ ಮಾತನ್ನು ಅವರ ಸ್ಥಾನದ ಮೇಲಿನ ಗೌರವದಿಂದಲೇ ಹೇಳಲು ಬಯಸುತ್ತೇವೆ ಎಂದು ಕೆಪಿಸಿಸಿ ಹೇಳಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹಿಂದೂ ಧರ್ಮದ ಗುತ್ತಿಗೆಯನ್ನು ಬಿಜೆಪಿಗಾಗಲಿ, ಆರ್ಎಸ್ಎಸ್ ಗಾಗಲಿ ನೀಡಿಲ್ಲ, ಬಿಜೆಪಿ ಅಂದರೆ ಇಡೀ ಹಿಂದೂ ಸಮಾಜವಲ್ಲ, ಹಾಗೆಯೇ ಪೇಜಾವರ ಸ್ವಾಮಿಗಳೂ ಸಹ ಇಡೀ ಹಿಂದೂ ಸಮಾಜದ ಪ್ರತಿನಿಧಿಯಲ್ಲ ಎಂದಿದೆ.
ಸ್ವಾಮಿಗಳು ರಾಜಕೀಯದಲ್ಲಿ ಆಸಕ್ತಿ ತೋರುವುದಕ್ಕಿಂತ ಸಾಮಾಜಿಕ ತಾರತಮ್ಯವನ್ನು ಹೋಗಲಾಡಿಸುವಲ್ಲಿ ಆಸಕ್ತಿ ತೋರಿದರೆ ಒಳಿತು. ಹಾಗೆಯೇ ತಮ್ಮ ಕ್ಷೇತ್ರವಲ್ಲದ ರಾಜಕೀಯದ ಬಗ್ಗೆ ಮಾತನಾಡುವಾಗ ಸತ್ಯಾಸತ್ಯತೆಯನ್ನು ಅರಿಯುವುದೊಳಿತು ಎಂದು ಸಲಹೆ ನೀಡಿದೆ.




