ಮಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು, ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಸಿ.ಟಿ. ರವಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
- ತಮ್ಮ ಮಕ್ಕಳ ಭವಿಷ್ಯದ ಮೇಲೆ ಇರುವ ಬಿಜೆಪಿಯವರ ಕಾಳಜಿ ಬಡವರ ಮಕ್ಕಳ ಮೇಲೇಕಿಲ್ಲ?: ಪ್ರಿಯಾಂಕ್ ಖರ್ಗೆ
- ಅಂಬೇಡ್ಕರ್ ಸಮಾನತೆ, ನ್ಯಾಯ, ಮಾನವ ಹಕ್ಕುಗಳಿಗಾಗಿ ಹೋರಾಡಿದ ಮಹಾನ್ ವ್ಯಕ್ತಿ: ಪಾಟೀಲ್
ಈ ವೇಳೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ಅಮಿತ್ ಶಾ ಅವರಿಗೆ ಗೃಹ ಸಚಿವರಾಗುವ ಅರ್ಹತೆ ಇಲ್ಲ. ಇಂತಹ ವ್ಯಕ್ತಿಗೆ ಗೃಹ ಸಚಿವ ಸ್ಥಾನದಂತಹ ಉನ್ನತ ಹುದ್ದೆ ನೀಡಲಾಗಿದೆ. ಅಂಬೇಡ್ಕರ್ ಬಗ್ಗೆ ಬಿಜೆಪಿಗೆ ಇರುವ ಭಾವನೆ ಅಮಿತ್ ಶಾ ಮೂಲಕ ಹೊರಬಿದ್ದಿದೆ. ಅಮಿತ್ ಶಾ ಅವರನ್ನು ಗೃಹ ಸಚಿವ ಹುದ್ದೆ ಯಿಂದ ಕೆಳಗೆ ಇಳಿಸಬೇಕು ಎಂದು ಒತ್ತಾಯಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಸಿ.ಟಿ. ರವಿಯನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು. ಈಗಾಗಲೇ ಬಂಧಿಸಿರುವ ಸಿ.ಟಿ. ರವಿ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇಡೀ ಸಮಾಜದ ಮಹಿಳೆಯರು ಸಿ.ಟಿ.ರವಿ ಹೇಳಿಕೆ ಖಂಡಿಸಬೇಕು ಎಂದು ಆಗ್ರಹಿಸಿದರು.




