ಸರಕಾರಿ ನೌಕರರ ಸಂಘದಿಂದ ಸನ್ಮಾನ
ಧಾರವಾಡ: ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕೃತರಾದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಮತ್ತು ಉತ್ತಮ ಜಿಲ್ಲಾ ವಿಪತ್ತು ಸಮಾಲೋಚಕ ಪ್ರಶಸ್ತಿ ಪುರಸ್ಕೃತ ವೆಂಕಟೇಶ ಬುಳ್ಳಾ ಹಾಗೂ ಅತ್ಯುತ್ತಮ ಗ್ರಾಮ ಆಡಳಿತ ಅಧಿಕಾರಿ ಪ್ರಶಸ್ತಿ ಪುರಸ್ಕೃತ ರಾಕೇಶ ತಂಗಡಗಿ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಧಾರವಾಡ ಜಿಲ್ಲಾ ಘಟಕದಿಂದ ಸನ್ಮಾನಿಸಿ, ಗೌರವಿಸಲಾಯಿತು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್, ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾಸಿದರು.
ಸರಕಾರಿ ನೌಕರ ಸಂಘದ ಪದಾಧಿಕಾರಿಗಳಾದ ದೇವಿದಾಸ್ ಶಾಂತಿಕರ, ಆರ್. ಬಿ. ಲಿಂಗದಾಳ, ಮಲ್ಲಿಕಾರ್ಜುನ ಸೊಲಗಿ, ಮಂಜುನಾಥ ಯಡಹಳ್ಳಿ, ರಾಜಶೇಖರ ಬಾಣದ್, ಪಿ. ಎಫ್. ಗುಡೇನಕಟ್ಟಿ, ಸುರೇಶ ಹಿರೇಮಠ, ಮಹೆಬೂಬ ನದಾಫ, ಆರ್. ಎಂ. ಕಂಠೆಪ್ಪಗೌಡ್ರ, ರಾಜೇಶ ಕೋನರಡ್ಡಿ, ಸುರೇಶ ಜಟ್ಟೆಣ್ಣವರ, ಶಾಂತಾ ಶೀಲವಂತ, ರೇಣುಕಾ ಮದಬಾವಿ, ಆರ್. ಎಸ್. ಹೊನ್ನಪ್ಪನವರ, ಪಿ. ವಿ. ಕುರಬೆಟ್ ಮೊದಲಾದವರು ಹಾಜರಿದ್ದರು.



