ಮೈಸೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಹೆಸರಿನ ದತ್ತಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಆರ್.ಜಯಕುಮಾರ್ರವರಿಗೆ ಮೈಸೂರಿನಲ್ಲಿ ಪ್ರದಾನ ಮಾಡಲಾಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅನಾರೋಗ್ಯದ ಕಾರಣ ಚಿತ್ರದುರ್ಗದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಆಗಮಿಸಿದ KUWJ ರಾಜ್ಯ ಅಧ್ಯಕ್ಷ ಶಿವಾನಂದ್ ತಗಡೂರ್ ಹಾಗೂ ಸಂಘದ ಪದಾಧಿಕಾರಿಗಳ ತಂಡ ಮತ್ತು ಮೈಸೂರಿನ ಪತ್ರಕರ್ತ ಗೆಳೆಯರು ಜಯಕುಮಾರ್ರವರ ಮನೆಯಂಗಳಕ್ಕೇ ತೆರಳಿ (ಬಯಲು ತೋಟ) ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದು ವಿಶೇಷವಾಗಿತ್ತು.
ಇದೇ ಸಂದರ್ಭದಲ್ಲಿ ಜಯಕುಮಾರ್ರವರ ಸ್ನೇಹಿತ ಬಳಗ, ಕುಟುಂಬ ವರ್ಗ ಹಾಗೂ ಮಾನವ ಬಂಧುತ್ವ ವೇದಿಕೆಯ ಸಂಗಾತಿಗಳು ಉಪಸ್ಥಿತರಿದ್ದರು. ದೂರದಿಂದ ಬಂದು ಮನೆಯಂಗಳದಲ್ಲೇ ಪ್ರಶಸ್ತಿ ನೀಡಿ ಗೌರವಿಸಿದ KUWJ ಗೆ ಜಯಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.




