ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನ ಮುಖಭಂಗ ಗ್ಯಾರೆಂಟಿ ಆಗುತ್ತಿದ್ದಂತೆ @RahulGandhi ಅವರು ಬಲವಂತವಾಗಿ ಸಿಎಂ @siddaramaiah ಹಾಗೂ ಡಿಸಿಎಂ @DKShivakumar ಅವರ ಕೈಯಲ್ಲಿ ಸುದ್ದಿಗೋಷ್ಠಿ ಮಾಡಿಸಿ “ವೋಟ್ ಚೋರಿ” ಮೆಗಾ ಧಾರಾವಾಹಿಯ ಮತ್ತೊಂದು ಸಂಚಿಕೆ ಬಿಡುಗಡೆ ಮಾಡಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಆಟಂ ಬಾಂಬ್, ಹೈಡ್ರೋಜನ್ ಬಾಂಬ್ ಎಂದು ಪದೇ ಪದೇ ಹೇಳಿದ ಸುಳ್ಳನ್ನೇ ಹೇಳಿ ಜನರ ಮುಂದೆ ಈಗಾಗಲೇ ನಗೆಪಾಟಲಿಗೀಡಾಗಿರುವ ರಾಹುಲ್ ಗಾಂಧಿ ಅವರನ್ನು ಬೆಂಬಲಿಸುವ ಮನಸ್ಸಿ ಲ್ಲದಿದ್ದರೂ ಕುರ್ಚಿ ಉಳಿಸಿಕೊಳಲು, ಕುರ್ಚಿ ಗಿಟ್ಟಿಸಿಕೊಳ್ಳಲು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಒಲ್ಲದ ಮನಸ್ಸಿನಿಂದ ನಾಮಕಾವಸ್ತೆ ಸುದ್ದಿ ಗೋಷ್ಠಿ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರು ತಮ್ಮ ಆರೋಪದಲ್ಲಿ ಹುರುಳಿದ್ದರೆ ಚುನಾವಣಾ ಆಯೋಗ ಕೇಳಿದಂತೆ ಅಫಿಡವಿಟ್ ಯಾಕೆ ಸಲ್ಲಿಸುತ್ತಿಲ್ಲ ನ್ಯಾಯಾಲಯದಲ್ಲಿ ಯಾಕೆ ಮೊಕದ್ದಮೆ ದಾಖಲಿಸುತ್ತಿಲ್ಲ?
ರಾಹುಲ್ ಗಾಂಧಿ ಅವರು ಮಾಡಿದ ಪ್ರತಿಯೊಂದು ಆರೋಪಕ್ಕೂ ಚುನಾವಣಾ ಆಯೋಗ ಸೂಕ್ತ ಪ್ರತ್ಯುತ್ತರ ನೀಡಿದೆ. ಮಾಧ್ಯಮಗಳು ರಾಹುಲ್ ಗಾಂಧಿ ಅವರು ಹೇಳಿದ್ದೆಲ್ಲಾ ಹಸಿ ಸುಳ್ಳು, ಕಟ್ಟು ಕಥೆ ಅಂತ ಸಾಬೀತು ಮಾಡಿವೆ. ಇಷ್ಟಾದರೂ ಪದೇ ಪದೇ ಅದೇ ಸುಳ್ಳನ್ನು ಹೇಳುತ್ತಿರುವ ರಾಹುಲ್ ಗಾಂಧಿ ಅವರ ಭಂಡತನವನ್ನ ನಿಜಕ್ಕೂ ಮೆಚ್ಚಲೇಬೇಕು.
ಇಷ್ಟಕ್ಕೂ ನಿಜವಾದ ಮತಗಳ್ಳತನ ಮಾಡುತ್ತಿರುವವರು ಕಾಂಗ್ರೆಸ್ ಪಕ್ಷದವರು. ಕರ್ನಾಟಕದಲ್ಲಿರುವ ಲಕ್ಷಾಂತರ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡದೇ ರಕ್ಷಣೆ ಕೊಡುತ್ತಿರುವ ಕಾಂಗ್ರೆಸ್ ಸರ್ಕಾರದ ಜಾಣ ಕುರುಡುತನದ ಹಿಂದಿರುವ ನಿಜವಾದ ಉದ್ದೇಶವೇ ಅಕ್ರಮ ಬಾಂಗ್ಲಾ ವಲಸಿಗರ ಕೈಯಲ್ಲಿ ಅಕ್ರಮ ಮತದಾನ ಮಾಡಿಸಿ ಆ ಮೂಲಕ ಚುನಾವಣೆ ಗೆಲ್ಲುವುದು.
ಕಾಂಗ್ರೆಸ್ ಪಕ್ಷಕ್ಕೆ ಮತಗಳ್ಳತನದ ಬಗ್ಗೆ ನಿಜವಾದ ಬದ್ಧತೆ ಇದ್ದರೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಕೂಡಲೇ ಕ್ರಮ ಕೈಗೊಂಡು ಗಡೀಪಾರು ಮಾಡಲಿ.
– ಆರ್.ಅಶೋಕ್, ವಿಧಾನಸಭೆ ವಿಪಕ್ಷ ನಾಯಕ




