ಬೆಂಗಳೂರು: ಹುಲಿ ದಾಳಿಯ ಬೆದರಿಕೆ ಹಿನ್ನೆಲೆಯಲ್ಲಿ ಬಂಡಿಪುರ ಅಭಯಾರಣ್ಯದಲ್ಲಿ ಸಫಾರಿ ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದಿಂದ ನೂರಾರು ಕುಟುಂಬಗಳು ಬೀದಿಗೆ ಬೀಳುವಂತಾಗಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಆಪಾದಿಸಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರೀತಿಯ ಪೂರ್ವಾಪರ ಆಲೋಚನೆ ಇಲ್ಲದೆ, ಯಾವುದೇ ತಜ್ಞರ ವರದಿಯೂ ಇಲ್ಲದೆ ಸಫಾರಿ ಸ್ಥಗಿತಗೊಳಿಸುವ ಮೂಲಕ ಈ ಪ್ರದೇಶದ ನೂರಾರು ಕುಟುಂಬಗಳ ಬದುಕಿನ ಆಸರೆಯೇ ಮುರಿದು ಬಿದ್ದಿದೆ. ಇವರೆಲ್ಲ ಊಟಕ್ಕಿಲ್ಲದೆ ಪರದಾಡುವ ಸ್ಥಿತಿಯಲ್ಲಿ ನಿರ್ಮಾಣವಾಗಿದೆ ಎಂದರು.
ಕರ್ನಾಟಕದಲ್ಲಿ ಜಂಗಲ್ ಸಫಾರಿ ಪ್ರವಾಸೋದ್ಯಮದ ಹೆಮ್ಮೆಯಾಗಿತ್ತು. ಆದರೆ ಸರ್ಕಾರ ಈಗ ‘ಕೋಣ ಮರಿ ಹಾಕಿದರೆ ಕೊಟ್ಟಿಗೆಗೆ ಕಟ್ಟು’ ಎಂಬಂತೆ ವರ್ತಿಸುತ್ತಿದೆ. ಆನೆಗಳ ಸಾವಿಗೆ ಸಫಾರಿ ನಿಲ್ಲಿಸುವುದೇ ಪರಿಹಾರವೇ? ಸಚಿವರು ಈ ಬಗ್ಗೆ ತಜ್ಞರ ವರದಿ ಪಡೆದಿದ್ದಾರೆಯೇ? ಅಥವಾ ರೆಸಾರ್ಟ್ ಮಾಲೀಕರ ಜೊತೆ ‘ಮಂತ್ಲಿ ಫಿಕ್ಸ್’ ಮಾಡಿಕೊಳ್ಳಲು ಈ ನಾಟಕವಾಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ವನ್ಯ ಮೃಗಗಳಿಗೆ ಉಳಿಗಾಲವಿಲ್ಲದಂತಾಗಿದೆ. ವೀರಪ್ಪನ್ ತನ್ನ 25 ವರ್ಷಗಳ ಕಾಡುಗಳ್ಳತನದ ಅವಧಿಯಲ್ಲಿ ಸುಮಾರು 500 ಆನೆಗಳನ್ನು ಕೊಂದಿರಬಹುದು. ಆದರೆ, ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಎರಡೂವರೆ ವರ್ಷದಲ್ಲಿ ಬರೋಬ್ಬರಿ 206 ಆನೆಗಳು ಸಾವನ್ನಪ್ಪಿವೆ. ಈ ಲೆಕ್ಕಾಚಾರ ನೋಡಿದರೆ ಸಿದ್ದರಾಮಯ್ಯ ಅವರಿಗಿಂತ ವೀರಪ್ಪನ್ನೇ ಬೆಸ್ಟ್ ಎನ್ನಿಸುತ್ತಿದೆ. ಕೇವಲ ಆನೆಗಳಲ್ಲದೆ, ಚಿರತೆ, ನವಿಲು ಸೇರಿದಂತೆ ವನ್ಯಜೀವಿಗಳ ರಕ್ಷಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.
ನಗರಗಳಲ್ಲಿ ಹಾವಿನ ಸಾಕಾಣಿಕೆ ಮತ್ತು ಮಾರಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದರು.




