ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗಾರರೊಂದಿಗೆ ಮಾತನಾಡಿ ಇನ್ನು ಮುಂದಾದರೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಚರ್ಚೆ ನಿಲ್ಲಬೇಕು ಎಂದರು.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಬಜೆಟ್ ಮಂಡನೆ ನಂತರ ರಾಜ್ಯದ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ನಾನೆ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ ಹೀಗಾಗಿ ಈ ಬಗ್ಗೆ ಚರ್ಚೆ ಅನಗತ್ಯ ಎಂದರು.
ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನಿಲ್ಲ. ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಮಾತನಾಡಲು ಸಕಾಲ ಅಲ್ಲ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಅವರ ನಿರ್ಧಾರಕ್ಕೆ ನಾವು ಕಾದು ನೋಡಬೇಕು ಎಂದರು.




