ಬೆಂಗಳೂರು: ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿದ್ದು, ಅವರ ನಿರ್ಧಾರದಂತೆ ಆಯ್ಕೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “೭೦ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ೭೦ ಮಂದಿ ಗಣ್ಯರನ್ನು ಸನ್ಮಾನಿಸಿ ಮಾತನಾಡಿದರು.
ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಷಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ, ನಿಮ್ಮ ಬದುಕು ಸಾರ್ಥಕವಾಗಲಿ ಎಂದು ಹಾರೈಸಿದರು.
ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ. ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೇ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದರು.
ಕನ್ನಡ ನಾಡು – ನುಡಿಯ ಬೆಳವಣಿಗೆಗೆ ಈ ಎಲ್ಲಾ ಸಾಧಕರ ಸೇವೆಗೆ ಈ ಮೂಲಕ ಗೌರವ ಸಲ್ಲಿಸಲಾಗಿದೆ. ಪ್ರಶಸ್ತಿ ಪುರಸ್ಕೃತರ ಜೀವನ ಸಾಧನೆ ಇತರರಿಗೆ ಮಾದರಿಯಾಗಲಿ. ಕನ್ನಡ ಭಾಷೆ ನಾಡಿನ ಮನೆ ಮನೆಗಳಲ್ಲಿ ನೆಲೆಸುವಂತಾಗಲಿ ಎಂದರು.




