ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ (2019ರಿಂದ 2023) ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ಒಂದೇ ಒಂದು ಮನೆ ನಿರ್ಮಿಸಿ ಕೊಟ್ಟಿರುವುದನ್ನು ಸಾಬೀತುಪಡಿಸಿದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಯಾವ ಜಿಲ್ಲೆಗಳಲ್ಲಿ ಎಷ್ಟು ಮನೆಗಳನ್ನು ನಿರ್ಮಿಸಿದೆ ಎಂಬುದನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಹೋಗಿ ಪರಿಶೀಲಿಸಲಿ ಎಂದರು.
ನಮಗೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ಒತ್ತಡವಿದೆ. ಆದರೆ, ಬಿಜೆಪಿ ಸರ್ಕಾರ ಇದ್ದಾಗ ಯಾವುದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರಲಿಲ್ಲ. ಆದರೂ ಮನೆಗಳನ್ನು ನಿರ್ಮಿಸಲು ಅವರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.
ಬಳ್ಳಾರಿಯಲ್ಲಿ ಸಣ್ಣ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆಯಿತು. ಜನಾರ್ದನ ರೆಡ್ಡಿ ಅವರು ದೊಡ್ಡ ಮನಸ್ಸು ಮಾಡಿ ಬ್ಯಾನರ್ ಕಟ್ಟಲು ಅವಕಾಶ ಮಾಡಿಕೊಟ್ಟಿದ್ದರೆ ಗಲಾಟೆ ಆಗುತ್ತಿರಲಿಲ್ಲ. ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ನಿರ್ಮಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ಅದನ್ನು ಬಿಜೆಪಿಯವರಿಗೆ ಮಾಡಲು ಸಾಧ್ಯವಾಗಿರಲಿಲ್ಲ. ಶಾಸಕ ಭರತ್ ರೆಡ್ಡಿ ಅವರು ಪ್ರತಿಮೆ ನಿರ್ಮಿಸಿದರು. ಅದನ್ನು ಅವರಿಗೆ ಸಹಿಲು ಸಾಧ್ಯವಾಗಲಿಲ್ಲ ಎಂದರು.
ಬಳ್ಳಾರಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ಧ ನಾವು ಪಾದಯಾತ್ರೆ ಮಾಡಿದ್ದೆವು. ಈಗ ಬಿಜೆಪಿಯವರು ಯಾವ ಉದ್ದೇಶಕ್ಕೆ ಪಾದಯಾತ್ರೆ ಮಾಡುತ್ತಾರೆ ಎಂದು ಪ್ರಶ್ನಿಸಿದರು.




