ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಚಿಂತನೆಗಳ ಜೊತೆಗೆ ಸಮಾಜದ ವೈಚಾರಿಕ ಅಂಶಗಳು ಮುನ್ನೆಲೆಗೆ ಬಂದಿವೆ: ಎಲ್.ಎನ್.ಮುಕುಂದರಾಜ್
ಬಳ್ಳಾರಿ: 19 ಮತ್ತು 20ನೇ ಶತಮಾನವನ್ನು ಸಂಕ್ರಮಣ ಕಾಲವೆಂದು ಹೇಳಲಾಗುತ್ತಿದ್ದು, ಅಂದಿನ ಸಮಯದಲ್ಲಿ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಚಿಂತನೆಗಳ ಜೊತೆಗೆ ವೈಚಾರಿಕ ಸಮಾಜದ ಅಂಶಗಳು ಮುನ್ನೆಲೆಗೆ ಬಂದವು ಎಂದು ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಹಾಗೂ ಪ್ರದರ್ಶನ ಕಲೆ ನಾಟಕ ವಿಭಾಗದ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಕನ್ನಡ ಭಾಷೆಯ ಏಳುಬೀಳುಗಳ ಸವಾಲುಗಳು ಮತ್ತು ಸಾಹಿತ್ಯದ ಸಾಂದರ್ಭಿಕ ಸವಾಲುಗಳು ಎಂಬ ವಿಷಯಗಳ ಮೇಲೆ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ, ಭಾಷೆ, ಪ್ರಾಂತ್ಯವಾರು ಪ್ರಾದೇಶಿಕ ವೈಶಿಷ್ಟ್ಯಗಳಿಂದ ತನ್ನದೇ ಆದ ಗಟ್ಟಿತನ ಒಳಗೊಂಡಿರುವುದರಿಂದ ಇಂದಿಗೂ ಕನ್ನಡ ಭಾಷೆ ನಿರಂತರವಾಗಿ ಮುಂದುವರೆಯುತ್ತಿದೆ ಎಂದರು.
ಗಡಿಭಾಗದ ಭಾಷೆಗಳಲ್ಲಿ ದ್ವಿಭಾಷಾ ಪದ್ಧತಿಯನ್ನು ಅಳವಡಿಸಿಕೊಂಡು ಜನಸಾಮಾನ್ಯರ ದಿನನಿತ್ಯದ ಬದುಕಿಗೆ ಆಧಾರವಾಗಿರುವ ಭಾಷೆ ತಮ್ಮದೇ ಆದ ಅಸ್ತಿತ್ವಗಳೊಂದಿಗೆ ಉಳಿದುಕೊಂಡು ಬರುತ್ತಿವೆ ಎಂದರು.
ರಾಜಕೀಯ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕವಾಗಿ ಕೊಡುಕೊಳ್ಳುವಿಕೆಗಳು ಆರಂಭಗೊಂಡು ಹೊಸ ಸಂವೇದನೆಯು ಹರಿಯತೊಡಗಿದವು. ಕನ್ನಡ ಸಾಹಿತ್ಯದ ಸಾಂದರ್ಭಿಕ ಸವಾಲುಗಳ ಕಣ್ಣ ಮುಂದೆ ಸಾಲುಗಟ್ಟಿ ನಿಂತಿವೆ ಎಂದರು.
ಕನ್ನಡ ಭಾಷೆಯು ಕನ್ನಡದ ಸಾಹಿತ್ಯವನ್ನು ಹೊಂದಿಕೊಂಡು ಪ್ರಾದೇಶಿಕ ವೈವಿಧ್ಯಮಯವಾಗಿ ವಿಜೃಂಭಿಸುತ್ತ ತನ್ನ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದೆ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹಾಗಾಗಿ ಕನ್ನಡ ಭಾಷೆಯ ಸಾಹಿತ್ಯ ಮುಂದಿನ ಪೀಳಿಗೆಗೆ ಕನ್ನಡ ಗದ್ಯಗಳು, ಕನ್ನಡ ನಾಟಕ, ಕನ್ನಡ ಭಾವಗೀತೆ, ಕನ್ನಡ ಕವಿಗಳ ಪರಿಚಯಗಳನ್ನ ಮಕ್ಕಳಿಗೆ ಬಾಲ್ಯದಲ್ಲೇ ಕಲಿಸುವ ಮೂಲಕ ಉಳಿಸಿ ಬೆಳೆಸುವ ಮೂಲಕ ನಾವು ಗಟ್ಟಿಗೊಳಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರದರ್ಶನ ಕಲೆ ನಾಟಕ ವಿಭಾಗದ ಮುಖ್ಯಸ್ಥ ಪ್ರೊ.ಎನ್.ಶಾಂತನಾಯಕ್, ಆರನಕಟ್ಟೆ ಡಾ.ರಂಗನಾಥ್, ಡಾ.ವಾತ್ಸಲ್ಯ, ಡಾ.ಸಂತೋಷ್ ಕುಮಾರ್, ಡಾ.ಅಣ್ಣಾಜಿ ಕೃಷ್ಣಾರೆಡ್ಡಿ, ಡಾ.ಶಿವಪ್ರಕಾಶ್, ಡಾ.ಸಹನಾ ಪಿಂಜಾರ್, ಡಾ.ಶಕೀಲ ಸೇರಿದಂತೆ ವಿವಿಧ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.




