ಬಿಜೆಪಿ – ಜೆಡಿಎಸ್ ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯ: ವಿಜಯೇಂದ್ರ

2 years ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ–ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಕರೆನೀಡಿದರು.

ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವ ಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಿ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ ಎಂದರು.

ಕರ್ನಾಟಕ ರಾಜ್ಯ ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ. ಇದಕ್ಕಾಗಿ ನಮ್ಮೆಲ್ಲರ ಶ್ರಮ ಅತ್ಯಗತ್ಯ ಎಂದರು.

ಮುಂದಿನ ಲೋಕಸಭಾ ಚುನಾವಣೆ ಈ ದೇಶದ ಭವಿಷ್ಯವನ್ನು ರೂಪಿಸಲಿದೆ. ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ. ಈ ಮೂಲಕ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸುವ ಚುನಾವಣೆ ಇದು ಎಂದರು.

Leave a Reply