ಬಿಜೆಪಿ ನಾಯಕರಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ತಿಂದಿದ್ದು ಜೀರ್ಣ ಆಗುವುದಿಲ್ಲ, ರಾತ್ರಿ ನಿದ್ದೆಯಲ್ಲೂ ಪಾಕಿಸ್ತಾನ ಪಾಕಿಸ್ತಾನ ಎಂದು ಕನವರಿಸುತ್ತಾರೋ ಏನೋ.
ಕಲಬುರಗಿಯ ಜಿಲ್ಲಾಧಿಕಾರಿಗಳ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರ ಹೇಳಿಕೆ ಅತ್ಯಂತ ಖಂಡನೀಯ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಪಾಕಿಸ್ತಾನ ಪ್ರೇಮಿ ಬಿಜೆಪಿಗರು ಇಷ್ಟು ದಿನ ರಾಜಕೀಯ ನಾಯಕರ ವಿರುದ್ಧ ಪಾಕಿಸ್ತಾನದ ಹೆಸರು ಪ್ರಯೋಗಿಸುತ್ತಿದ್ದರು, ಈಗ ಅವರ ನಾಲಿಗೆ ಇನ್ನೂ ಉದ್ದವಾಗಿ ಅಧಿಕಾರಿಗಳನ್ನೂ ಪಾಕಿಸ್ತಾನದಿಂದ ಬಂದವರು ಎನ್ನುವ ಮಟ್ಟಿಗೆ ಬಂದಿದೆ.
ಸೇನಾಧಿಕಾರಿಗೆ ಭಯೋತ್ಪಾದಕರ ಸಹೋದರಿ ಎಂದರು, ಸೈನಿಕರು ಮೋದಿಯ ಕಾಲಿಗೆ ಬೀಳುತ್ತಾರೆ ಎಂದರು, ಇಲ್ಲಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದವರು ಎಂದರು. ಬಿಜೆಪಿಗರ ಜ್ಞಾನವು ಪಾಕಿಸ್ತಾನ, ಮುಸ್ಲಿಂ ವಿಚಾರಗಳನ್ನು ದಾಟಿ ಮುಂದೆ ಹೋಗುವುದೇ ಇಲ್ಲ.
ಅಧಿಕಾರಿಗಳ ನೈತಿಕ ಸ್ಥೈರ್ಯ ಕಸಿಯುವ ಪ್ರಯತ್ನದಲ್ಲಿರುವ ರವಿಕುಮಾರ್ ಅವರೇ, ಕಲಬುರಗಿಯ ಜಿಲ್ಲಾಧಿಕಾರಿ IAS (INDIAN Administrative Service) ಪಾಸ್ ಮಾಡಿ ದೇಶಸೇವೆಗೆ, ಜನಸೇವೆಗೆ ಬಂದವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರಿಗೆ ಅತ್ಯುತ್ತಮ ಚುನಾವಣಾ ಅಧಿಕಾರಿಯ ಪ್ರಶಸ್ತಿಯನ್ನು ಪ್ರದಾನ ಕೂಡ ಮಾಡಿದರು.
ನಿಮ್ಮ ಹಾಗೆ ಯಾರಿಗೋ ಬಹುಪರಾಕ್ ಹೇಳಿಕೊಂಡು, RSSನವರ ಗುಲಾಮಗಿರಿ ಮಾಡಿಕೊಂಡು ಸ್ಥಾನ ಗಿಟ್ಟಿಸಿಕೊಂಡವರಲ್ಲ.
ಅಧಿಕಾರಿಯ ಧರ್ಮ ಯಾವುದಾದರೂ ಅವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಜನಸೇವೆಗೆ ಬಂದಿರುತ್ತಾರೆ. ಸಂವಿಧಾನದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಯಾರಿಗೆ ಹೇಗೆ ಮಾತಾಡಬೇಕು ಎಂಬ ಮಿನಿಮಮ್ ಕಾಮನ್ ಸೆನ್ಸ್ ಇಲ್ಲದ ನಿಮ್ಮಂತವರು ಕರ್ನಾಟಕದ ರಾಜಕಾರಣಕ್ಕೆ ಕಳಂಕ.
ದೇಶ ಸೇವೆಗಾಗಿ ಸಮರ್ಪಿಸಿಕೊಂಡಿರುವವರನ್ನು ಹಿಯಾಳಿಸುವುದು ಬಿಜೆಪಿಗರಿಗೆ ಚಟವಾಗಿ ಪರಿಣಮಿಸಿದೆ. ದೇಶಕ್ಕಾಗಿ ದುಡಿಯುವ ಸೇನಾಧಿಕಾರಿ ಸೋಫಿಯಾ ಖುರೇಷಿಯವರ ಧರ್ಮ ನೋಡಿ ಭಯೋತ್ಪಾದಕರ ಸಹೋದರಿ ಎಂದಿದ್ದ ಬಿಜೆಪಿಯ ವಿಜಯ್ ಶಾ ಹೇಳಿಕೆಗೂ ರವಿಕುಮಾರ್ ಅವರ ಹೇಳಿಕೆಗೂ ಯಾವುದೇ ವ್ಯತ್ಯಾಸವಿಲ್ಲ.
ಹಗಲು ರಾತ್ರಿ ಜನರಿಗಾಗಿ ಕೆಲಸ ಮಾಡುವ ಅಧಿಕಾರಿಗಳು, ಸೈನಿಕರನ್ನು ಅವಮಾನಿಸುವುದನ್ನು ವ್ಯಸನ ಮಾಡಿಕೊಂಡಿರುವ ಬಿಜೆಪಿಗರ ದುರಹಂಕಾರಕ್ಕೆ ಜನತೆ ಪಾಠ ಕಲಿಸಲಿದ್ದಾರೆ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ




