ಬಿಜೆಪಿ ನಾಯಕರಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ತಿಂದಿದ್ದು ಜೀರ್ಣ ಆಗುವುದಿಲ್ಲ, ರಾತ್ರಿ ನಿದ್ದೆಯಲ್ಲೂ ಪಾಕಿಸ್ತಾನ ಪಾಕಿಸ್ತಾನ ಎಂದು ಕನವರಿಸುತ್ತಾರೋ ಏನೋ.
ಕಲಬುರಗಿಯ ಜಿಲ್ಲಾಧಿಕಾರಿಗಳ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರ ಹೇಳಿಕೆ ಅತ್ಯಂತ ಖಂಡನೀಯ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪಾಕಿಸ್ತಾನ ಪ್ರೇಮಿ ಬಿಜೆಪಿಗರು ಇಷ್ಟು ದಿನ ರಾಜಕೀಯ ನಾಯಕರ ವಿರುದ್ಧ ಪಾಕಿಸ್ತಾನದ ಹೆಸರು ಪ್ರಯೋಗಿಸುತ್ತಿದ್ದರು, ಈಗ ಅವರ ನಾಲಿಗೆ ಇನ್ನೂ ಉದ್ದವಾಗಿ ಅಧಿಕಾರಿಗಳನ್ನೂ ಪಾಕಿಸ್ತಾನದಿಂದ ಬಂದವರು ಎನ್ನುವ ಮಟ್ಟಿಗೆ ಬಂದಿದೆ.
ಸೇನಾಧಿಕಾರಿಗೆ ಭಯೋತ್ಪಾದಕರ ಸಹೋದರಿ ಎಂದರು, ಸೈನಿಕರು ಮೋದಿಯ ಕಾಲಿಗೆ ಬೀಳುತ್ತಾರೆ ಎಂದರು, ಇಲ್ಲಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದವರು ಎಂದರು. ಬಿಜೆಪಿಗರ ಜ್ಞಾನವು ಪಾಕಿಸ್ತಾನ, ಮುಸ್ಲಿಂ ವಿಚಾರಗಳನ್ನು ದಾಟಿ ಮುಂದೆ ಹೋಗುವುದೇ ಇಲ್ಲ.
ಅಧಿಕಾರಿಗಳ ನೈತಿಕ ಸ್ಥೈರ್ಯ ಕಸಿಯುವ ಪ್ರಯತ್ನದಲ್ಲಿರುವ ರವಿಕುಮಾರ್ ಅವರೇ, ಕಲಬುರಗಿಯ ಜಿಲ್ಲಾಧಿಕಾರಿ IAS (INDIAN Administrative Service) ಪಾಸ್ ಮಾಡಿ ದೇಶಸೇವೆಗೆ, ಜನಸೇವೆಗೆ ಬಂದವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರಿಗೆ ಅತ್ಯುತ್ತಮ ಚುನಾವಣಾ ಅಧಿಕಾರಿಯ ಪ್ರಶಸ್ತಿಯನ್ನು ಪ್ರದಾನ ಕೂಡ ಮಾಡಿದರು.
ನಿಮ್ಮ ಹಾಗೆ ಯಾರಿಗೋ ಬಹುಪರಾಕ್ ಹೇಳಿಕೊಂಡು, RSSನವರ ಗುಲಾಮಗಿರಿ ಮಾಡಿಕೊಂಡು ಸ್ಥಾನ ಗಿಟ್ಟಿಸಿಕೊಂಡವರಲ್ಲ.
ಅಧಿಕಾರಿಯ ಧರ್ಮ ಯಾವುದಾದರೂ ಅವರು ಸಂವಿಧಾನದ ಮೇಲೆ ಪ್ರಮಾಣ ಮಾಡಿ ಜನಸೇವೆಗೆ ಬಂದಿರುತ್ತಾರೆ. ಸಂವಿಧಾನದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಯಾರಿಗೆ ಹೇಗೆ ಮಾತಾಡಬೇಕು ಎಂಬ ಮಿನಿಮಮ್ ಕಾಮನ್ ಸೆನ್ಸ್ ಇಲ್ಲದ ನಿಮ್ಮಂತವರು ಕರ್ನಾಟಕದ ರಾಜಕಾರಣಕ್ಕೆ ಕಳಂಕ.
ದೇಶ ಸೇವೆಗಾಗಿ ಸಮರ್ಪಿಸಿಕೊಂಡಿರುವವರನ್ನು ಹಿಯಾಳಿಸುವುದು ಬಿಜೆಪಿಗರಿಗೆ ಚಟವಾಗಿ ಪರಿಣಮಿಸಿದೆ. ದೇಶಕ್ಕಾಗಿ ದುಡಿಯುವ ಸೇನಾಧಿಕಾರಿ ಸೋಫಿಯಾ ಖುರೇಷಿಯವರ ಧರ್ಮ ನೋಡಿ ಭಯೋತ್ಪಾದಕರ ಸಹೋದರಿ ಎಂದಿದ್ದ ಬಿಜೆಪಿಯ ವಿಜಯ್ ಶಾ ಹೇಳಿಕೆಗೂ ರವಿಕುಮಾರ್ ಅವರ ಹೇಳಿಕೆಗೂ ಯಾವುದೇ ವ್ಯತ್ಯಾಸವಿಲ್ಲ.
ಹಗಲು ರಾತ್ರಿ ಜನರಿಗಾಗಿ ಕೆಲಸ ಮಾಡುವ ಅಧಿಕಾರಿಗಳು, ಸೈನಿಕರನ್ನು ಅವಮಾನಿಸುವುದನ್ನು ವ್ಯಸನ ಮಾಡಿಕೊಂಡಿರುವ ಬಿಜೆಪಿಗರ ದುರಹಂಕಾರಕ್ಕೆ ಜನತೆ ಪಾಠ ಕಲಿಸಲಿದ್ದಾರೆ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ




