ಬೆಂಗಳೂರು: ನಕ್ಸಲ್ ವಿಕ್ರಂಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಿಕ್ರಂಗೌಡ ಮೇಲೆ ಕೊಲೆ ಸೇರಿದಂತೆ 60ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ. ಆಟೋಮ್ಯಾಟಿಕ್ ಮಷಿನ್ ಗನ್ ಇಟ್ಟುಕೊಂಡಿದ್ದ. ಈ ಹಿಂದೆ ಶರಣಾಗಾತಿಗಾಗಿ ಪ್ರಯತ್ನಗಳು ನಡೆದಿದ್ದವು. ಅವರ ಸಂಬಂಧಿಕರು ಸಹ ಶರಣಾಗುವಂತೆ ಹೇಳಿದ್ದರೂ ವಿಕ್ರಂಗೌಡ ಒಪ್ಪಿರಲಿಲ್ಲ ಎಂದರು.
ಕಾರ್ಕಳದಲ್ಲಿ ಎಎನ್ಎಫ್ ಹೆಡ್ಕ್ವಾಟರ್ಸ್ ಇದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಟ್ಟುಕೊಂಡು ಬರಲಾಗಿದೆ. ಕಳೆದ ವಾರ ನಕ್ಸಲ್ ಲತಾ ಎಂಬುವರನ್ನು ಗುರುತಿಸಲಾಗಿತ್ತು. ಕೂಂಬಿಂಗ್ ನಡೆಸಲಾಗಿತ್ತು. ಅವರನ್ನ ಹಾಗೇ ಬಿಟ್ಟುಕೊಂಡು, ಏನು ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ ಎಂದರು.
ಎನ್ಕೌಂಟರ್ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ವ್ಯತ್ಯಾಸವಿಲ್ಲ ಎಂಬ ಕೆಲವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ನಕ್ಸಲ್ ವಿಚಾರದಲ್ಲಿ ಪಕ್ಷದ ಪ್ರಶ್ನೆ ಬರುವುದಿಲ್ಲ. ಜನರ ಸುರಕ್ಷತೆ ಮುಖ್ಯವಾಗುತ್ತದೆ ಎಂದರು.




