ಬಳ್ಳಾರಿ: ರಾಜ್ಯ ಸರ್ಕಾರ 2024-25 ನೇ ಸಾಲಿನ ಅಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಬಳ್ಳಾರಿ ಜಿಲ್ಲೆಯ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಗೆ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು.
ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ಇದರಿಂದ ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ. ಹಾಗಾಗಿ ಸಾರ್ವಜನಿಕರು ಎನಿವೇರ್ ನೋಂದಣಿ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬಹುದು.




