ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ವಾರ್ಡ್ ಆರ್.ಜಿ.ಐ.ಕಾಲೋನಿ ಅಶ್ವಥ್ ಕಟ್ಟೆ ರೋಡ್ ಮತ್ತು ದೇವಸ್ಥಾನ ರಸ್ತೆ ಡಾಂಬರೀಕರಣ ಕಾಮಗಾರಿ, ದಯಾನಂದನಗರ 1ನೇ ರಸ್ತೆ ಮತ್ತು 1ನೇ ಮುಖ್ಯರಸ್ತೆ ಡಾಂಬರೀಕರಣ, ಚರಂಡಿ ಹೂಳು ತೆಗೆಯುವ ಕಾಮಗಾರಿ, ಶ್ರೀರಾಂಪುರ 7ನೇ ಮುಖ್ಯರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಮಾಜಿ ಶಿಕ್ಷಣ ಸಚಿವ, ಶಾಸಕ ಸುರೇಶ್ ಕುಮಾರ್, ಬಿಬಿಎಂಪಿ ಮಾಜಿ ಸದಸ್ಯ ಎಂ.ಮುನಿರಾಜುರವರು ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಇದೇ ವೇಳೆ ಮಾತನಾಡಿದ ಎಸ್.ಸುರೇಶ್ ಕುಮಾರ್, ರಾಜಾಜಿನಗರ ವಿಧಾನಸಭಾ ಕ್ಷೇತ್ರ ಪ್ರಜ್ಞಾವಂತ, ವಿದ್ಯಾವಂತರು ಇರುವ ಕ್ಷೇತ್ರ. ಜನರ ಆಶಯದಂತೆ ಮತ್ತು ಸಾರ್ವಜನಿಕರಿಗೆ ಅವಶ್ಯಕತೆ ಇರುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕರ ತೆರಿಗೆ ಹಣ ಸಮರ್ಪಕವಾಗಿ ಬಳಕೆಯಾಗಬೇಕು ಎಂದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕು. ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ನೇರವಾಗಿ ಅಲಿಸಿ ತತಕ್ಷಣ ಪರಿಹಾರ ಸಿಗಬೇಕು ಎಂಬ ನಿಟ್ಟಿನಲ್ಲಿ ಜನರೊಂದಿಗೆ ಜನಸೇವಕ ಜನಸ್ಪಂದನಾ ಕಾರ್ಯಕ್ರಮ ಮತ್ತು ದಿನಕ್ಕೊಂದು ವಾರ್ಡ್ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ. ಎರಡು ಜನಸ್ಪಂದನಾ ಕಾರ್ಯಕ್ರಮಗಳಿಂದ ಸಾವಿರಾರು ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ ಎಂದರು.
ಜಿಬಿಎ ಅಧಿಕಾರಿಗಳು ಮತ್ತು ಸ್ಥಳೀಯ ಬಿಜೆಪಿ ಮುಖಂಡರು, ಸಾರ್ವಜನಿಕರು ಸೇರಿದಂತೆ ನಾಗರಿಕರು ಹಾಗೂ ಕಾರ್ಯಕರ್ತರು ಹಾಜರಿದ್ದರು.




