ಬಳ್ಳಾರಿ: ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯವನ್ನು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಉದ್ಘಾಟಿಸಿದರು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಬಳಿಕ ಮಾತನಾಡಿದ ಅವರು, ಯಾವುದೇ ಅಡ್ಡ ಪರಿಣಾಮಗಳಿಲ್ಲದ ಆಯುರ್ವೇದ ಚಿಕಿತ್ಸಾಲಯದ ಸೇವೆಗಳನ್ನು ಸಮರ್ಪಕವಾಗಿ ಸಾರ್ವಜನಿಕರು ಉಪಯೋಗಿಸಿಕೊಳ್ಳಬೇಕು ಎಂದು ನಾಗರಿಕರಿಗೆ ಕರೆನೀಡಿದರು.
ಪ್ರತಿ ಖಾಯಿಲೆಗೂ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಉತ್ತಮವಾದ ಚಿಕಿತ್ಸೆ ಉಚಿತವಾಗಿ ಲಭ್ಯವಿದ್ದು, ಸಾರ್ವಜನಿಕರು ಚಿಕಿತ್ಸಾಲಯದ ಸೇವೆಯನ್ನು ಸದುಪಯೋಗ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಕೋಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ದೊಡ್ಡಬಸಮ್ಮ, ಉಪಾಧ್ಯಕ್ಷ ಚೆನ್ನಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷ, ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಕೆ.ಪಿ.ಕಲ್ಯಾಣಿ ಸೇರಿದಂತೆ ಕೋಳೂರು ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಗ್ರಾಮದ ಮುಖಂಡರು, ಸಾರ್ವಜನಿಕರು ಮತ್ತು ಚಿಕಿತ್ಸಾಲಯದ ಸಿಬ್ಬಂದಿ ಹಾಜರಿದ್ದರು.



