ಮಂಗಳೂರು: ಬಡಪಾಯಿ ಬೀದಿಬದಿ ವ್ಯಾಪಾರಸ್ಥರು ಜೀವನೋಪಾಯಕ್ಕಾಗಿ ತಲಪಾಡಿ ಟೋಲ್ ಗೇಟ್ ಪರಿಸರದಲ್ಲಿ ವ್ಯಾಪಾರ ನಡೆಸುತ್ತಿದ್ದು, ಅವರ ಮೇಲೆ ಏಕಾಏಕಿ ದಾಳಿ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮ ತೀರಾ ಖಂಡನೀಯವಾಗಿದೆ ಎಂದು ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ದಿ ಸಂಘದ ಗೌರವಾಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದ.ಕ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ (ರಿ.)ದ ನೇತ್ರತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರ ತಲಪಾಡಿ ವಲಯ ಸಮಾವೇಶ ಉದ್ಘಾಟಿಸಿ ಅವರು ಈ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಬದಿಯ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಕಿರುಕುಳ ನೀಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಈ ಸಮಾವೇಶ ವನ್ನು ಆಯೋಜಿಸಲಾಗಿತ್ತು.
ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ಎಕರೆಗಟ್ಟಲೆ ಭೂಮಿಯನ್ನು ಕಬಳಿಸಿದ ಅತಿಕ್ರಮಣದಾರರ ವಿರುದ್ಧ ಎಳ್ಳಷ್ಟೂ ಕ್ರಮ ವಹಿಸದ ಹೆದ್ದಾರಿ ಪ್ರಾಧಿಕಾರ ಬಡಪಾಯಿಗಳ ಮೇಲೆ ಧಾಳಿ ನಡೆಸಿರುವುದು ಎಷ್ಟು ಸರಿ? ಬೀದಿಬದಿ ವ್ಯಾಪಾರದ ಮೂಲಕ ಬದುಕು ಕಟ್ಟಿಕೊಂಡ ವ್ಯಾಪಾರಸ್ಥರ ಬದುಕನ್ನೇ ನಾಶ ಮಾಡಲು ಹೊರಟ ಹೆದ್ದಾರಿ ಪ್ರಾಧಿಕಾರದ ದುರಂಹಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರವನ್ನು ನೀಡಲಿದ್ದೇವೆ ಎಚ್ಚರಿಕೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನಮ್ಮ ಬಡ ಬೀದಿವ್ಯಾರಿಗಳ ವಿರುದ್ಧ ಕಾರ್ಯಾಚರಣೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು, ಗ್ರಾಮ ಪಂಚಾಯತ್, ಪುರಸಭಾ, ಪಟ್ಟಣ ಪಂಚಾಯತ್, ನಗರಸಭೆ, ಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಅವರಿಗೆ ಗುರುತಿನ ಚೀಟಿಯನ್ನು ಕೊಡುವಂತಹ ಮತ್ತು ಅವರ ಬದುಕಿನ ಹಕ್ಕನ್ನು ರಕ್ಷಣೆ ಮಾಡುವ ಎಲ್ಲಾ ರೀತಿಯ ಸಹಕಾರವನ್ನು ಕೊಡುವಂತಹ ಕೆಲಸವನ್ನು ಸ್ಥಳೀಯ ಸಂಸ್ಥೆ ಮಾಡಬೇಕು, ಪೋಲೀಸರು ಮತ್ತು ಅಧಿಕಾರಿಗಳಿಂದ ಕಿರುಕುಳವನ್ನು ನಿಲ್ಲಿಸಬೇಕು, ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ತಕ್ಷಣ ಅವರ ಕಾರ್ಯಾಚರಣೆಯನ್ನು ನಿಲ್ಲಿಸಿ ಬಡ ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಅಗಸ್ಟ್ 1 ರಂದು ಬೃಹತ್ ಪ್ರತಿಭಟನೆಯನ್ನು ತಲಪಾಡಿಯಲ್ಲಿ ನಡೆಸಲಿದ್ದೇವೆ ಎಂದರು.
ಸಿ.ಐ.ಟಿ.ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ನಮ್ಮ ಬದುಕನ್ನು ನಾಶ ಮಾಡಲು ಹೊರಟಿರುವವರಿಗೆ ನಾವು ಎಚ್ಚರಿಸಲು ಇಂದು ಸೇರಿದ್ದೇವೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅನ್ಯಾಯ ಮಾಡುತ್ತಾರೆ, ನಾವು ಯಾರಿಗೂ ತೊಂದರೆ ಮಾಡದೆ ಪ್ರಾಮಾಣಿಕವಾಗಿ ಬದುಕನ್ನು ನಿರ್ವಹಿಸುತ್ತಿದ್ದೇವೆ,ನಾವು ಬೀದಿಬದಿಯಲ್ಲಿ ಕೆಲಸ ಮಾಡದೆ ಹೋದರೆ ನಿರುದ್ಯೋಗ ಸಮಸ್ಯೆ ಹೆಚ್ಚಾಗುತಿತ್ತು,ನಾವು ನಿರುದ್ಯೋಗ ಪಟ್ಟಿಯಿಂದ ಹೊರಬಂದು ಬೀದಿಬದಿಯಲ್ಲಿ ವ್ಯಾಪಾರ ಮಾಡಿ ಇಂದು ನಮ್ಮ ಸಂಸಾರದ ಕನಿಷ್ಟ ನಾಲ್ಕು ಜನರ ಬದುಕನ್ನು ನಡೆಸುತ್ತಿದ್ದೇವೆ ಆದರೂ ಕಷ್ಟದಲ್ಲಿ ಕೆಲಸಮಾಡುವ ಬೀದಿಬದಿ ವ್ಯಾಪಾರಿಗಳ ಮೇಲೆ ಇವರು ಸವಾರಿ ಮಾಡುತ್ತಿದ್ದಾರೆ ಎಂದರು.
ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಸುರೇಖಾ ಚಂದ್ರಹಾಸ್ ಮಾತನಾಡಿ, ಬದುಕನ್ನು ಹತ್ತಿಕ್ಕುವವರ ವಿರುದ್ಧ ಹೋರಾಟ ಮಾಡುವುದು ನಮ್ಮ ಹಕ್ಕು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸುಪ್ರೀಮ್ ಕೋರ್ಟ್ ಆದೇಶವನ್ನು ಕೈಯಲ್ಲಿ ಹಿಡಿದು ಬಡವರ ಹಕ್ಕನ್ನು ಕಸಿಯುತ್ತಿದ್ದಾರೆ. ಈಗಲಾದರೂ ನಾವು ಎಚ್ಚೆತ್ತು ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದರು.




