ಧಾರವಾಡ: ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿ ಡಾ. ರಾಮ್ ಪ್ರಸಾದ್ ಮನೋಹರ ಧಾರವಾಡ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಕಾಮಗಾರಿ, ಯೋಜನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ನರೇಂದ್ರ ಗ್ರಾಮ ವ್ಯಾಪ್ತಿಯ ಕಾಯಕನಗರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕಟ್ಟಡ ಪರಿಶೀಲಿಸಿದರು. ಮಕ್ಕಳ ದಾಖಲಾತಿ, ಪೊಷನ್ ಅಭಿಯಾನದ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡರು.
ನಂತರ ಅವರು ಕುರಬಗಟ್ಟಿ ಗ್ರಾಮದಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಘಟಕದ ಕಾರ್ಯ ನಿರ್ವಹಣೆ ಬಗ್ಗೆ ಅದನ್ನು ನಿರ್ವಹಿಸುತ್ತಿರುವ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸದಸ್ಯರಿಂದ ಮಾಹಿತಿ ಪಡೆದುಕೊಂಡರು. ಜಲ ಜೀವನ ಮಿಷನ್ ಯೋಜನೆಯಲ್ಲಿ ನೂತನವಾಗಿ ನಿರ್ಮಿಸಿರುವ ಮೇಲ್ಮಟ್ಟದ ಜಲಸಂಗ್ರಹಗಾರ ಓಎಚ್ಟಿಗೆ ಭೇಟಿ ನೀಡಿದರು.
ನಂತರ ಕುರಬಗಟ್ಟಿ ಗ್ರಾಮ ಪಂಚಾಯತದ ಡಿಜಿಟಲ್ ಗ್ರಂಥಾಲಯ ವೀಕ್ಷಿಸಿ, ಅದರ ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲಿನ ಕೂಸಿನ ಮನೆಗೆ ತೆರಳಿ, ಮಕ್ಕಳ ಆಟ ಪಾಠದ ಬಗ್ಗೆ ವಿವರ ಪಡೆದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಜಿಲ್ಲಾ ಪಂಚಾಯತ ಕಾರ್ಯ ಚಟುವಟಿಕೆ, ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್.ಕುಕನೂರ, ತಾಲೂಕು ಪಂಚಾಯತ ಇಓ ಗಂಗಾಧರ ಕಂದಕೂರ, ಸಹಾಯಕ ನಿರ್ದೇಶಕ ಚಂದ್ರು ಪೂಜಾರ, ಸದಾನಂದ ಅಮರಾಪುರ, ಸಿಡಿಪಿಓ, ಪಿಡಿಓ ನಾಗರತ್ನಾ ತಪೇಲಿ, ಗ್ರಾಮ ಪಂಚಾಯತ ಸದಸ್ಯರು ಹಾಜರಿದ್ದರು.



