ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವಿಧಾನ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ
ದಾವಣಗೆರೆ: ನಗರದಲ್ಲಿ ಈಗಾಗಲೇ ಮಳೆ ನೀರು ಕೊಯ್ಲು ಕಡ್ಡಾಯವಾಗಿದೆ. ಆದರೂ ಬಹಳಷ್ಟು ಮನೆಗಳಲ್ಲಿ ಅಳವಡಿಸಿಕೊಂಡಿರುವುದಿಲ್ಲ, ಇದು ನೀರಿನ ಅಭಾವದ ಜೊತೆಗೆ ಅಂತರ್ಜಲಮಟ್ಟ ಕುಸಿತವಾಗಲು ಕಾರಣವಾಗಿದ್ದು ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವಿಧಾನವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವುದು ಹಾಗೂ ಕಟ್ಟಡದ ಮಾಲೀಕರು ಕಟ್ಟಡದಲ್ಲಿ ಮಳೆ ನೀರು ಕೊಯ್ಲಿನ ವಿಧಾನವನ್ನು ಅಳವಡಿಸದೇ ಇರುವುದು ಕಂಡುಬಂದಿದ್ದು, ಅಂತಹ ಕಟ್ಟಡದ ಮಾಲೀಕರಿಗೆ ದಂಡ ವಿಧಿಸಲಾಗುವುದು.
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೊಡ್ಡ ಮನೆಗಳಿಗೆ (40*60 ಅಡಿ ಮೇಲ್ಪಟ್ಟ ನಿವೇಶನಗಳಲ್ಲಿನ ಕಟ್ಟಡ/ಜಿ+2 ಕಟ್ಟಡ) ರೂ 10,000 ಹಾಗೂ ಚಿಕ್ಕಮನೆಗಳಿಗೆ ರೂ 5,000 ರಂತೆ ದಂಡವನ್ನು ಕಟ್ಟಡದ ಮಾಲೀಕರಿಂದ ಪಾವತಿಸಿಕೊಳ್ಳಲಾಗುತ್ತದೆ ಎಂಬ ಸೂಚನೆ ಕೊಟ್ಟಿದ್ದಾರೆ.
ನಗರ ಯೋಜನೆ ಶಾಖೆಯಿಂದ ಎಲ್.ಬಿ.ಪಿ.ಎ.ಎಸ್ ಆನ್ಲೈನ್ ತಂತ್ರಾಂಶದಲ್ಲಿ ಕಟ್ಟಡ ಪರವಾನಿಗೆ ಅರ್ಜಿಗಳನ್ನು ಸ್ವೀಕರಿಸಿ ವಸತಿ, ವಾಣಿಜ್ಯ ,ಕೈಗಾರಿಕೆ ಹಾಗೂ ಇತರೆ ಉದ್ದೇಶದ ಕಟ್ಟಡ ನಿರ್ಮಿಸಲು ಕಟ್ಟಡ ಪರವಾನಿಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.




