ದಾವಣಗೆರೆ: ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಗಟ್ಟಲು ಸರ್ಕಾರಿ, ಸಾರ್ವಜನಿಕ, ಖಾಸಗಿ ವಲಯ ಕಾರ್ಖಾನೆಗಳು, ಗಾರ್ಮೆಂಟ್, ಸ್ವಯಂ ಸೇವಾ ಸಂಘ-ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಇಲಾಖೆ, ಇತ್ಯಾದಿ ಕಡೆ ಅಂತರಿಕ ದೂರು ನಿವಾರಣಾ ಸಮಿತಿಗಳನ್ನು ರಚನೆ ಮಾಡದೇ ಇರುವ ಸಂಸ್ಥೆಗಳಲ್ಲಿ ಆಂತರಿಕ ದೂರು ನಿವಾರಣೆ ಸಮಿತಿಗಳನ್ನು ರಚನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಸಮಿತಿ ರಚನೆ ಮಾಡದ ಸಂಸ್ಥೆಗಳ ಮೇಲೆ ಪಿಓಎಸ್ಹೆಕಚ್ 2013ರ ಕಾಯ್ದೆಯ ಸೆಕ್ಷನ್ 26 ರ ಪ್ರಕಾರ ಹಾಗೂ ಸಬ್ಸೆಂಕ್ಷನ್ 1 (4) ರ ಪ್ರಕಾರ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು, ಹಾಗೂ ಸಮಿತಿಗಳು ರಚನೆಯಾಗಿರುವ ,ರಚನೆಯಾಗದಿರುವ ಬಗ್ಗೆ ಮಾಹಿತಿಯು ಷಿಬಾಕ್ಸ್ ಪೋರ್ಟಲ್(She-Box Portal)ನಲ್ಲಿ ಲಭ್ಯವಿರುತ್ತದೆ. ಜಿಲ್ಲೆಯ ಮಾಹಿತಿಯನ್ನು ಪರಿಶೀಲಿಸಲಾಗಿದ್ದು ಜಿಲ್ಲೆಯಲ್ಲಿ ಇನ್ನೂ ಅಂತರಿಕ ದೂರು ಸಮಿತಿಯನ್ನು ರಚನೆ ಮಾಡದೇ ಇರುವ ಸಂಸ್ಥೆಗಳಲ್ಲಿ ತುರ್ತಾಗಿ ಸಮಿತಿ ರಚಿಸಿ ಮತ್ತು ಈಗಾಗಲೇ ರಚನೆ ಮಾಡಿರುವ ಸಮಿತಿಗಳನ್ನು ಸಂಸ್ಥೆಯ ಇತರೆ ಮಾಹಿತಿಯೊಂದಿಗೆ ಶೀಬಾಕ್ಸ್ ಪೋರ್ಟಲ್ನಸಲ್ಲಿ ಇಂಡೀಕರಿಸಲು ಆದ್ಯತೆಯ ಮೇರೆಗೆ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ.
ಈಗಾಗಲೇ ಅಸಂಘಟಿತ ವಲಯ, ಮನೆ ಕೆಲಸದ ಮಹಿಳೆಯರು 10ಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರಿಗೆ ಉಂಟಾಗುವ ಲೈಂಗಿಕ ಕಿರುಕುಳದ ಕುರಿತು ದೂರು ಸಲ್ಲಿಸಲು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸ್ಥಳೀಯ ದೂರು ನಿರ್ವಹಣಾ ಸಮಿತಿಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.




