ಲೇಖಕರಿಗೆ ವಿಶಿಷ್ಟ ಅವಕಾಶ
ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ತನ್ನ ಪ್ರಸ್ತುತ ಸಾಲಿನ ಯೋಜನೆಯಲ್ಲಿ ಬಂಜಾರ ಸಮುದಾಯದ ಕಲೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯ ವಿವಿಧ ಆಯಾಮಗಳನ್ನು ದಾಖಲಿಸಲು ಉದ್ದೇಶಿಸಿರುವ ಮಹತ್ವದ ಯೋಜನೆಯ ಭಾಗವಾಗಿ, ಕನಿಷ್ಠ 25 ಪುಟಗಳ 100 ವಿಭಿನ್ನ ವಿಷಯಗಳಿಗೆ ಸಂಬಂಧಿಸಿದಂತೆ ಕೃತಿಗಳನ್ನು ಪ್ರಕಟಣೆ ಮಾಡಲು ಬಂಜಾರ ಅಕಾಡೆಮಿ ನಿರ್ಧರಿಸಿದೆ. ಆರಂಭಿಕ ಹಂತದಲ್ಲಿ, ಆಯ್ಕೆ ಸಮಿತಿಯ ಶಿಫಾರಸ್ಸು ಮೇರೆಗೆ 50 ಕಿರು ಹೊತ್ತಿಗೆಗಳ ರಚನೆಗಾಗಿ ಲೇಖಕರನ್ನು ಆಯ್ಕೆ ಮಾಡಲಾಗುವುದು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಯೋಜನೆಯ ಅಡಿಯಲ್ಲಿ ಲೇಖಕರು ತಮ್ಮ ಕೃತಿಗಳನ್ನು ಈ ಕೆಳಗಿನ ಪ್ರಮುಖ ವಿಷಯಗಳಲ್ಲಿ ರಚಿಸಬಹುದು:
ಬಂಜಾರ ಕಲಾ ಪರಂಪರೆ
ಬಂಜಾರ ಭಾಷೆ ಮತ್ತು ಸಾಹಿತ್ಯ ಮೌಖಿಕ ಸಾಹಿತ್ಯ
ಬಂಜಾರ ಜನಜೀವನ ಮತ್ತು ಸಂಪ್ರದಾಯಗಳು, ಆಚರಣೆಗಳು, ಹಬ್ಬಗಳು ಇತರೆ
ಬಂಜಾರ ಸಮುದಾಯದ ಹಿರಿಯ ಸಾಧಕರು, ಸಾಹಿತಿಗಳು, ಕಲಾವಿದರು ಹಾಗೂ ತಜ್ಞರು, ರಾಷ್ಟ್ರ-ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತರು
ಬಂಜಾರ ಹೋರಾಟಗಾರರು ಮತ್ತು ಪ್ರಮುಖ ಸಾಮಾಜಿಕ, ಸಾಂಸ್ಕೃತಿಕ ಪ್ರಮುಖ ಮುಖಂಡರು
ಬಂಜಾರ ಪ್ರಮುಖ ಶ್ರದ್ಧಾ ಕೇಂದ್ರಗಳು
ಬಂಜಾರ ಐತಿಹಾಸಿಕ ತಾಣಗಳು
ಬಂಜಾರ ಸಮಾಜಶಾಸ್ತ್ರ
ಬಂಜಾರ ಶಿಕ್ಷಣ
ಬಂಜಾರ ನೃತ್ಯ
ಬಂಜಾರ ಸಂಗೀತ
ಬಂಜಾರ ನಾಟಕಗಳು ಹಾಗೂ ಪ್ರಯೋಗಗಳು ಮೊದಲಾದ ಕ್ಷೇತ್ರಗಳು
ಈ ಅಕಾಡೆಮಿಯ ಮಹತ್ವದ ಕೆಲಸದಲ್ಲಿ ಲೇಖಕರು ಕೈಜೋಡಿಸಿ ಭಾಗವಹಿಸಲು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಎ.ಆರ್.ಗೋವಿಂದಸ್ವಾಮಿ ಕೋರಿದ್ದಾರೆ.
ಆಸಕ್ತ ಬಂಜಾರ ಹಾಗೂ ಇತರೆ ಲೇಖಕರು ತಮ್ಮ ಕೃತಿಗಳ ಶೀರ್ಷಿಕೆಗಳ, ಸಾರಾಲೇಖ ಹಾಗೂ ಸ್ವವಿವರಗಳನ್ನು ದಿನಾಂಕ:19.07.2025 ರ ಒಳಗಾಗಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಕಚೇರಿಗೆ ನೊಂದಾಯಿಸಿಕೊಳ್ಳಲು ಅಥವಾ ಕಚೇರಿಗೆ ಖುದ್ದಾಗಿ ಅರ್ಚಿ ಸಲ್ಲಿಸಲು ಅಥವಾ ಅಂಚೆ, ಕೋರಿಯರ್ ಮೂಲಕ ಸ್ವವಿವರದೊಂದಿಗೆ ಹೆಸರನ್ನು ನೊಂದಾಯಿಸಿಕೊಳ್ಳಲು ಅವಕಾಶವಿದೆ.
ಯುವ ಬಂಜಾರ ಸಂಶೋಧಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಲೇಖಕರಿಗೆ ನಿಯಮಾನುಸಾರ ಗೌರವ ಸಂಭಾವನೆ ಪಾವತಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಳಾಸ: ರಿಜಿಸ್ಟ್ರಾರ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಕನ್ನಡ ಭವನ , 1 ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560002
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 080-29917745




