ಹಾಸನ: ರೈತರಿಗೆ, ರೈತ ಮಹಿಳೆಯರಿಗೆ ಹಾಗೂ ಆಸಕ್ತಿಯುಳ್ಳ ಎಲ್ಲರಿಗೂ ಪಶು ಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ತರಬೇತಿಯನ್ನು ಏರ್ಪಡಿಸಲಾಗಿದೆ.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ತರಬೇತಿಯಲ್ಲಿ ಭಾಗವಹಿಸುವ ಶಿಭಿರಾರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ಸ್ಟೈಫಂಡ್ ನೀಡಲಾಗುವುದಿಲ್ಲ.
ಆಸಕ್ತಿಯುಳ್ಳವರು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಎರಡು ಭಾವಚಿತ್ರ ಹಾಗೂ ಪರಿಶಿಷ್ಟ ಜಾತಿ / ಪಂಗಡಕ್ಕೆ ಸೇರಿದವರು ಜಾತಿ ಪ್ರಮಾಣ ಪತ್ರದೊಂದಿಗೆ ತರಬೇತಿ ಪ್ರಾರಂಭವಾಗುವ ದಿನಾಂಕದಂದು ಬೆಳಿಗ್ಗೆ 10.30 ಗಂಟೆಯೊಳಗೆ ಉಪ ನಿರ್ದೆಶಕರ ಕಛೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಸಂತೇಪೇಟೆ, ಹಾಸನದಲ್ಲಿ ಹಾಜರಾಗಬೇಕು.
ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಜೂನ್ 05 ಮತ್ತು 6ರಂದು, ರೈತರಿಗೆ ಆಧುನಿಕ ಕುರಿ ಮತ್ತು ಮೇಕೆ ಸಾಕಣಿಕೆ ತರಬೇತಿ ಜೂನ್ 17 ಮತ್ತು 18 ರಂದು, ರೈತರಿಗೆ ವೈಜ್ಞಾನಿ ಕೋಳಿ ಸಾಕಣಿಕೆ ತರಬೇತಿ ಜೂನ್ 20 ಮತ್ತು 21 ರಂದು ಇರುತ್ತದೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172-235226 ಸಂಪರ್ಕಿಸಹುದು.




